ಸಂಗ್ರಹ ಚಿತ್ರ 
ದೇಶ

ರಾಷ್ಟ್ರೀಯ ಹೆದ್ದಾರಿಯಲ್ಲಿ ಇನ್ನು ದೂರ ಹೋದಷ್ಟು ಮಾತ್ರ ಟೋಲ್ ಶುಲ್ಕ!

ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಪಾವತಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತರಲು ನಿರ್ಧರಿಸಿದ್ದು, ಇನ್ನು ಮುಂದೆ ವಾಹನ ಸವಾರರು ತಾವು ಸಾಗುವ ದೂರಕ್ಕೆ ಮಾತ್ರ ಟೋಲ್ ಶುಲ್ಕ ಪಾವತಿ ಮಾಡಿದರೆ ಸಾಕು..

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಶುಲ್ಕ ಪಾವತಿ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆ ತರಲು ನಿರ್ಧರಿಸಿದ್ದು, ಇನ್ನು ಮುಂದೆ ವಾಹನ ಸವಾರರು ತಾವು ಸಾಗುವ ದೂರಕ್ಕೆ ಮಾತ್ರ ಟೋಲ್ ಶುಲ್ಕ  ಪಾವತಿ ಮಾಡಿದರೆ ಸಾಕು..
ಹೌದು..ಇಂತಹುದೊಂದು ಟೋಲ್ ವ್ಯವಸ್ಥೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವ ವಾಹನಗಳು ತಾವು ಸಾಗಿದ ದೂರಕ್ಕೆ ಮಾತ್ರ ಶುಲ್ಕ ಪಾವತಿಸುವಂಥ ಹೊಸ ವ್ಯವಸ್ಥೆಯನ್ನು  ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಸಾರಿಗೆ ಇಲಾಖೆಯ ಕಾರ್ಯದರ್ಶಿ ಯುದ್ ವೀರ್ ಸಿಂಗ್‌ ಮಲಿಕ್‌ ಅವರು ಶುಕ್ರವಾರ ಮಾಹಿತಿ ನೀಡಿದ್ದು, ಟೋಲ್‌ ವ್ಯವಸ್ಥೆಯಲ್ಲೇ ವಿನೂತನ ಹೆಜ್ಜೆಯೆಂದು ಹೇಳಲಾಗುವ  "ಇಂಟಲಿಜೆನ್ಸ್‌ ಟ್ರಾನ್ಸ್‌ಪೊàರ್ಟ್‌ ಮ್ಯಾನೇಜ್‌ಮೆಂಟ್‌' ಎಂಬ ಹೊಸ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ರೂಪಿಸುತ್ತಿದ್ದು, ಮುಂದಿನ ವರ್ಷ ಈ ವ್ಯವಸ್ಥೆ ಜಾರಿಗೆ ಬರಲಿದೆ.
ಈಗ ಸದ್ಯಕ್ಕೆ ಚಾಲ್ತಿಯಲ್ಲಿರುವ ಟೋಲ್‌ ಪದ್ಧತಿಯನ್ನು ಮುಂದಿನ ವರ್ಷದಿಂದ ಕೈಬಿಡಲು ನಿರ್ಧರಿಸಲಾಗಿದ್ದು, ಹೊಸ ವ್ಯವಸ್ಥೆ ಜಾರಿಗೆ ಬರಲಿದೆ. ಅದರಂತೆ, ಹೆದ್ದಾರಿಗಳಲ್ಲಿ ಸಾಗುವ ಪ್ರತಿಯೊಂದು ವಾಹನ, ತಾನು ಚಲಿಸಿದ  ದೂರಕ್ಕಷ್ಟೇ ಶುಲ್ಕ ಕಟ್ಟುವ ಅನುಕೂಲ ಕಲ್ಪಿಸಲಾಗುತ್ತದೆ. ಇದು, ವಾಹನ ಸವಾರರಿಗೆ ಅನಗತ್ಯವಾಗಿ ತಮ್ಮ ಬಳಕೆಗೂ ಮೀರಿ ಹೆಚ್ಚು ಟೋಲ್‌ ಕಟ್ಟುವಂಥಹ ಹೊರೆಯನ್ನು ತಪ್ಪಿಸುತ್ತದೆಸ ಎಂದು ಮಲಿಕ್ ಹೇಳಿದರು.
ಅಂತೆಯೇ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಾಗುವ ವಾಹನವು ಚಲಿಸಿದ ದೂರ ಹಾಗೂ ಅದಕ್ಕೆ ಅನುಗುಣವಾದ ಶುಲ್ಕವನ್ನು ನಿಗದಿಗೊಳಿಸಲೆಂದೇ 'ಡಿಸ್ಟೆನ್ಸ್‌ ಬೇಸ್ಡ್ ಎಲೆಕ್ಟ್ರಾನಿಕ್‌ ಟೋಲಿಂಗ್‌' ಎಂಬ ವಿನೂತನ ತಂತ್ರಜ್ಞಾನವನ್ನು  ಅಳವಡಿಸಲಾಗುವುದು. ಈಗಾಗಲೇ, ಈ ತಂತ್ರಜ್ಞಾನ ಅಮೆರಿಕ, ಆಸ್ಟ್ರೇಲಿಯಾದಂಥಹ ರಾಷ್ಟ್ರಗಳಲ್ಲಿ ಚಾಲ್ತಿಯಲ್ಲಿವೆ. ಈ ನೂತನ ವ್ಯವಸ್ಥೆ ಮೂಲಕ ವಾಹನ ಸವಾರರಿಗೆ ಶುಲ್ಕದ ಹೊರೆ ಖಂಡಿತವಾಗಿಯೂ ಇಳಿಕೆಯಾಗುತ್ತದೆ  ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT