ಸಂಗ್ರಹ ಚಿತ್ರ 
ದೇಶ

ಗುಜರಾತ್ ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 9 ನವಜಾತ ಶಿಶುಗಳ ಸಾವು!

ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯ ಮಕ್ಕಳ ಸರಣಿ ಸಾವಿನ ಬೆನ್ನಲ್ಲೇ ಅಂತಹುದೇ ಘಟನೆ ಗುಜರಾತ್ ನ ಮಹಿಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಅಹ್ಮದಾಬಾದ್: ಉತ್ತರ ಪ್ರದೇಶದ ಗೋರಖ್ ಪುರದ ಬಿಆರ್ ಡಿ ಆಸ್ಪತ್ರೆಯ ಮಕ್ಕಳ ಸರಣಿ ಸಾವಿನ ಬೆನ್ನಲ್ಲೇ ಅಂತಹುದೇ ಘಟನೆ ಗುಜರಾತ್ ನ ಮಹಿಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಕೇವಲ 24 ಗಂಟೆಗಳ ಅವಧಿಯಲ್ಲಿ ಬರೊಬ್ಬರಿ 9 ನವಜಾತ ಶಿಶುಗಳ ಸಾವನ್ನಪ್ಪಿರುವ ಘಟನೆ ಗುಜರಾತ್ ನ ಮಹಿಸಾಗರ ಜಿಲ್ಲೆಯಲ್ಲಿ ನಡೆದಿದ್ದು, ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈ ಸಾವುಗಳು ಶನಿವಾರ ಸಂಭವಿಸಿವೆ ಎಂದು  ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಈ ಪೈಕಿ ಐದು ಶಿಶುಗಳನ್ನು ಮಹಿಸಾಗರ ಜಿಲ್ಲೆಯ ಲೂನಾವಾಡ ಆಸ್ಪತ್ರೆ, ಸುರೇಂದ್ರನಗರ, ಗಾಂಧಿನಗರ ಜಿಲ್ಲೆಯ ಮನ್ಸಾ, ಅಹ್ಮದಾಬಾದ್ ಜಿಲ್ಲೆಯ ವಿರಾಮಗಾಮ ಹಾಗೂ ಸಬರಕಾಂತ ಜಿಲ್ಲೆ  ಹಿಮ್ಮತ್‌ ನಗರದಿಂದ ಸ್ಥಳಾಂತರಿಸಲಾಗಿತ್ತು. ನಾಲ್ಕು ಮಕ್ಕಳು ಇದೇ ಸರ್ಕಾರಿ ಆಸ್ಪತ್ರೆಯಲ್ಲಿ ಜನ್ಮ ತಾಳಿದ್ದವು.
ಈ ಎಲ್ಲ ಒಂಬತ್ತು ಮಕ್ಕಳೂ ಕಡಿಮೆ ತೂಕದ ಮಕ್ಕಳು ಎಂದು ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಎಂ.ಎಂ.ಪ್ರಭಾಕರ್ ಹೇಳಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಶಿಶುಗಳನ್ನು ನಮ್ಮ ಆಸ್ಪತ್ರೆಗೆ ಕಳುಹಿಸಲಾಗಿತ್ತು. ವೈದ್ಯರು ಕೂಡ ಸೂಕ್ತ  ಚಿಕಿತ್ಸೆ ನೀಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಕ್ಕಳು ಸಾವನ್ನಪ್ಪಿವೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ.
ಲೂನಾವಾಡದಿಂದ ತಂದ ಒಂದು ಮಗು ಕೇವಲ 1.1 ಕೆ.ಜಿ. ತೂಕ ಹೊಂದಿತ್ತು. 130 ಕಿಲೋಮೀಟರ್ ದೂರದಿಂದ ಆ ಶಿಶುವನ್ನು ತರಲಾಗಿತ್ತು. ವಾಸ್ತವವಾಗಿ ಅಲ್ಲೇ ಪಕ್ಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಿತ್ತಾದರೂ ತೀರಾ  ಪರಿಸ್ಥಿತಿ ಕೈಮೀರಿದಾಗ ಈ ಆಸ್ಪತ್ರೆಗೆ ಕಳುಹಿಸುವ ಪ್ರಕರಣಗಳು ಹೊಸದಲ್ಲ ಎಂದು ಅವರು ಸ್ಪಷ್ಟಪಡಿಸಿದರು. ವೈದ್ಯರ ಗೈರಿನಿಂದಾಗಿ ಮಕ್ಕಳು ಮೃತಪಟ್ಟಿವೆ ಎಂಬ ವರದಿಗಳನ್ನು ಅಲ್ಲಗಳೆದ ಅವರು, ಶನಿವಾರ ಎಲ್ಲ ವೈದ್ಯರು  ಮತ್ತು ದಾದಿಯರು ಕರ್ತವ್ಯದಲ್ಲಿದ್ದರು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರ್ನಾಟಕ ಮೂಲದ ವ್ಯಕ್ತಿಯ ಶಿರಚ್ಛೇದ ಪ್ರಕರಣ: ಅಕ್ರಮ ವಲಸಿಗರ ಬಗ್ಗೆ ಮೃದು ಧೋರಣೆ ತೋರುವ ಕಾಲ ಮುಗಿದಿದೆ- ಟ್ರಂಪ್

ಗ್ರೇಟರ್ ಬೆಂಗಳೂರು ಚುನಾವಣೆಗೆ ಭದ್ರ ಬುನಾದಿ ಹಾಕುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್!

Asia Cup 2025: ಪಾಕ್ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್! Video

ರಾಜಕೀಯ ಲಾಭಕ್ಕಾಗಿ 'ಮೃದು ಹಿಂದುತ್ವ'ಕ್ಕೆ ಕೈ ಹಾಕುತ್ತಿರುವ ಡಿ.ಕೆ ಶಿವಕುಮಾರ್ - ಡಾ. ಪರಮೇಶ್ವರ್?

Asia Cup 20225: Operation Sindoor ಬಳಿಕ ಪಾಕಿಸ್ತಾನಕ್ಕೆ ಮತ್ತೆ ಸೋಲಿನ ರುಚಿ ತೋರಿಸಿದ ಭಾರತ!

SCROLL FOR NEXT