ಛತ್ತೀಸ್ಗಢ ಮುಖ್ಯಮಂತ್ರಿ ರಮಣ್ ಸಿಂಗ್ 
ದೇಶ

ಸೆಕ್ಸ್ ಸಿಡಿ ಪ್ರಕರಣ: ಸಿಬಿಐಗೆ ಪತ್ರ ಬರೆದ ಛತ್ತೀಸ್'ಗಢ ಸಿಎಂ

ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಾಜೇಶ್ ಮುನಾತ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ತನಿಖೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಪತ್ರವೊಂದರನ್ನು ಬರೆದಿದ್ದಾರೆಂದು...

ರಾಯ್ಪುರ: ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ರಾಜೇಶ್ ಮುನಾತ್ ವಿರುದ್ಧ ಕೇಳಿಬಂದಿರುವ ಆರೋಪಕ್ಕೆ ಸಂಬಂಧಿಸಿದಂತೆ ಛತ್ತೀಸ್ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ತನಿಖೆ ನಡೆಸುವಂತೆ ಸಿಬಿಐ ಅಧಿಕಾರಿಗಳಿಗೆ ಪತ್ರವೊಂದರನ್ನು ಬರೆದಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
ಪ್ರಕರಣ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಛತ್ತೀಸ್'ಗಢ ಸರ್ಕಾರದ ವರ್ಚಸ್ಸನ್ನು ಹಾಳು ಮಾಡುವ ಸಲುವಾಗಿ ಕಾಂಗ್ರೆಸ್ ಈ ರೀತಿಯ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಈ ರೀತಿಯ ಕೀಳುಮಟ್ಟಕ್ಕೆ ಇಳಿಯುತ್ತದೆ ಎಂದು ನಾವು ಊಹಿಸಿರಲಿಲ್ಲ. ಆರೋಪಕ್ಕೆ ಸಂಬಂಧಿಸಿದಂತೆ ನಾನು ತನಿಖೆ ನಡೆಸುವಂತೆ ಸಿಬಿಐಗೆ ಪತ್ರವನ್ನು ಬರೆದಿದ್ದು, ಭವಿಷ್ಯದಲ್ಲಿ ಯಾವುದೇ ಪಕ್ಷಗಳು ಈ ರೀತಿಯ  ವಿಚಾರಗಳನ್ನು ಇಟ್ಟುಕೊಂಡು ತಮ್ಮ ರಾಜಕೀಯ ಲಾಭಕ್ಕೆ ಇಂತಹ ಕೀಳುಮಟಕ್ಕೆ ಇಳಿಯಬಾರದು ಎಂದು ತಿಳಿಸಿದ್ದಾರೆ. 
ಸುಲಿಗೆ ಹಾಗೂ ಬ್ಲ್ಯಾಕ್ ಮೇಲೆ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಪತ್ರಕರ್ತ, ಬಿಬಿಸಿ ಹಿಂದಿ ವಿಭಾಗದ ಮಾಜಿ ವರದಿಗಾರ ಮತ್ತು ಛತ್ತೀಸ್'ಗಢ ಕಾಂಗ್ರೆಸ್'ನ ಸಾಮಾಜಿಕ ಜಾಲತಾಣ ಘಟಕದ ಮುಖ್ಯಸ್ಥ ವಿನೋದ್ ವರ್ಮಾ ಅವರನ್ನು ಕೆಲ ದಿನಗಳ ಹಿಂದಷ್ಟೇ ಬಂಧನಕ್ಕೊಳಪಡಿಸಲಾಗಿತ್ತು. 
ವಿನೋದ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದ ಪೊಲೀಸರು ಅವರ ಬಳಿಯಿದ್ದ ಹಲವು ಅಶ್ಲೀಲ ವಿಡಿಯೋಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಛತ್ತೀಸ್ಗಢ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಭುಪೇಂದ್ರ ಬಘೇಲ್ ವಿರುದ್ಧವೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು. 
ವಿಚಾರಣೆ ವೇಳೆ ವಿನೋದ್ ವರ್ಮಾ ಅವರು ಛತ್ತೀಸ್ಗಢ ಸಚಿವರು ಭಾಗಿಯಾಗಿರುವ ಸೆಕ್ಸ್ ಸಿಡಿಯೊಂದು ತನ್ನ ಬಳಿಯಿರವುದಾಗಿ ಹೇಳಿಕೊಂಡಿದ್ದರು. ಸಚಿವ ರಾಜೇಶ್ ಮುನ್ನಾತ್ ಅವರ ಸೆಕ್ಸ್ ಸಿಡಿ ನನ್ನ ಬಳಿಯಿದ್ದು, ಹೀಗಾಗಿ ನನ್ನ ವಿರುದ್ದ ಸರ್ಕಾರ ತಿರುಗಿಬಿದ್ದಿದೆ ಎಂದು ಆರೋಪಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT