ರಮಣ್ ಸಿಂಗ್ 
ದೇಶ

ಲೈಂಗಿಕ ಸಿಡಿ ಪ್ರಕರಣ: ಸಿಬಿಐ ಗೆ ಪತ್ರ ಬರೆದ ಛತ್ತೀಸ್ ಘಡ ಮುಖ್ಯಮಂತ್ರಿ

ಛತ್ತೀಸ್ಗಢದ ಸಚಿವ ರಾಜೇಶ್ ಮುನಾಟ್ ವಿರುದ್ಧದ ಆರೋಪಗಳ ತನಿಖೆಯನ್ನು ನಡೆಸುವಂತೆ ಛತ್ತೀಸ್ ಘಡ ಮುಖ್ಯಮಂತ್ರಿ ರಮಣ್ ಸಿಂಗ್ ಕೇಂದ್ರೀಯ ತನಿಖಾ ದಳ (ಸಿಬಿಐ) ಗೆ ಪತ್ರ ಬರೆದಿದ್ದಾರೆ.

ರಾಯ್ ಪುರ್: ಛತ್ತೀಸ್ಗಢದ ಸಚಿವ ರಾಜೇಶ್ ಮುನಾಟ್ ವಿರುದ್ಧದ ಆರೋಪಗಳ ತನಿಖೆಯನ್ನು ನಡೆಸುವಂತೆ ಛತ್ತೀಸ್ ಘಡ ಮುಖ್ಯಮಂತ್ರಿ ರಮಣ್ ಸಿಂಗ್ ಕೇಂದ್ರೀಯ ತನಿಖಾ ದಳ (ಸಿಬಿಐ) ಗೆ ಪತ್ರ ಬರೆದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಂಗ್, ಚತ್ತೀಸ್ ಘಡ ಸರ್ಕಾರದ ಹೆಸರು ಕೆಡಿಸುವ ಉದ್ದೇಶದಿಂದ ಕಾಂಗ್ರೆಸ್ ಈ ಯೊಜನೆ ರೂಪಿಸಿದೆ ಎಂದರು.
"ಕಾಂಗ್ರೆಸ್ ಈ ಮಟ್ಟಕ್ಕೆ ಇಳಿಯಲಿದೆ ಎಂಬ ಕಲ್ಪನೆಯೂ ನಮಗಿರಲಿಲ್ಲ. ಈ ವಿಷಯವನ್ನು ತನಿಖೆ ಮಾಡಲು ನಾನು ಸಿಬಿಐಗೆ ಪತ್ರವೊಂದನ್ನು ಬರೆದಿದ್ದೇನೆ. ಆದ್ದರಿಂದ ತಮ್ಮ ರಾಜಕೀಯ ಲಾಭಕ್ಕಾಗಿ ಯಾರೊಬ್ಬರ ತೆಗಳಲು ಭವಿಷ್ಯದಲ್ಲಿ ಇತರ ಪಕ್ಷಗಳು ಇಂತಹಾ ಮಾರ್ಗವನ್ನು ಬಳಸುವುದಿಲ್ಲ." ಸಿಂಗ್ ಹೇಳಿದರು.
ಏತನ್ಮಧ್ಯೆ, ನಿನ್ನೆ, ಹಿರಿಯ ಪತ್ರಕರ್ತ ವಿನೋದ್ ವರ್ಮಾ ಅವರನ್ನು ಮೂರು ದಿನಗಳ ಮಟ್ಟಿಗೆ ವಿಚಾರಣೆಗಾಗಿ ರಾಯ್ ಪುರ್ ನ ಮಾನಾ ಪೊಲೀಸ್ ಠಾಣೆಗೆ ಕರೆದೊಯ್ದರು.
ಅ.27 ರಂದು ವಿನೋದ್ ವರ್ಮಾರನ್ನು ಛತ್ತಿಶ್ ಘಡ  ಪೊಲೀಸರು ಬ್ಲ್ಯಾಕ್ ಮೇಲ್ ಆರೋಪದ ಮೇಲೆ ಬಂಧಿಸಿದ್ದರು. ಉತ್ತರಪ್ರದೇಶದ ಘಾಜಿಯಾಬಾದ್ ನ ಅವರ ನಿವಾಸದಿಂದ ವಿನೋದ್ ವರ್ಮಾ ಅವರನ್ನು ಬಂಧಿಸಿ ಕರೆದೊಯ್ಯಲಾಗಿತ್ತು..

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT