ಸಂಗ್ರಹ ಚಿತ್ರ 
ದೇಶ

ಉಗ್ರರ ನಂಟು ಶಂಕೆ: ದಿಯೋಬಂದ್, ಮುಜಾಫರ್'ನಗರದ ಎಲ್ಲಾ ಪಾಸ್'ಪೋರ್ಟ್'ಗಳ ತನಿಖೆಗೆ ಮುಂದಾದ ಸರ್ಕಾರ

ಉತ್ತರಪ್ರದೇಶ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗ ತೊಡಗಿರುವ ಹಿನ್ನಲೆಯಲ್ಲಿ ದಿಯೋಬಂದ್ ಹಾಗೂ ಮುಜಾಫರ್ ನಗರದ ಎಲ್ಲಾ ಪಾಸ್'ಪೋರ್ಟ್ ಗಳನ್ನು ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ...

ಮುಜಾಫರ್'ನಗರ: ಉತ್ತರಪ್ರದೇಶ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗ ತೊಡಗಿರುವ ಹಿನ್ನಲೆಯಲ್ಲಿ ದಿಯೋಬಂದ್ ಹಾಗೂ ಮುಜಾಫರ್ ನಗರದ ಎಲ್ಲಾ ಪಾಸ್'ಪೋರ್ಟ್ ಗಳನ್ನು ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಕೆಲ ದಿನಗಳ ಹಿಂದಷ್ಟೇ ಬಾಂಗ್ಲಾದೇಶ ಮೂಲದ ಇಬ್ಬರು ಶಂಕಿತ ಉಗ್ರರನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಉಗ್ರರು ದಿಯೋಬಂದ್ ವಿಳಾಸದಲ್ಲಿರುವ ಭಾರತದ ಪಾಸ್'ಪೋರ್ಟ್ ಗಳನ್ನು ತೋರಿಸಿದ್ದರು. 

ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದ ಉಗ್ರರು ದಿಯೋಬಂದ್ ನಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ದಿಯೋಬಂದ್ ಹಾಗೂ ಮುಜಾಫರ್ ನಗರದಲ್ಲಿರುವ ಎಲ್ಲಾ ಪಾಸ್ ಪೋರ್ಟ್ ಗಳನ್ನು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಉತ್ತರಪ್ರದೇಶ ಸರ್ಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

ದಿಯೋಬಂದ್ ಹಾಗೂ ಮುಜಾಫರ್ ನಗರದಲ್ಲಿ ಅಕ್ರಮವಾಗಿ ನೆಲೆಯೂರಿರುವ ಬಾಂಗ್ಲಾದೇಶಿಗರ ವಿರುದ್ಧ ಕ್ರಮಗೊಳ್ಳುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್'ಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಅಲ್ಲದೆ, ಬಾಂಗ್ಲಾದೇಶ ರಾಷ್ಟ್ರೀಯರಿಗೆ ನಕಲಿ ಗುರುತಿನ ಚೀಟಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾಸಿಗೆ ಸೂಚಿಸಿದೆ ಎನ್ನಲಾಗಿದೆ. 

ದಿಯೋಬಂದ್ ಒಂದರಲ್ಲಿ ಮಾತ್ರವಲ್ಲದೆ ಮುಜಾಫರ್'ನಗರ ಮತ್ತು ಸಹರಾನ್ಪುರದಲ್ಲಿಯೂ ಉಗ್ರರ ಚಟುವಟಿಕೆಗಳು ಕಂಡುಬಂದಿದ್ದು, ಉತ್ತರಪ್ರದೇಶ ಇತರೆಡೆಯೂ ಪಾಸ್'ಪೋರ್ಟ್ ಗಳ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ ಎಂದು ಸಹರಾನ್ಪುರ ಡಿಐಜಿ ಕೆ.ಎಸ್. ಎಮ್ಮಾನ್ಯುಯಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT