ಸಂಗ್ರಹ ಚಿತ್ರ 
ದೇಶ

ಉಗ್ರರ ನಂಟು ಶಂಕೆ: ದಿಯೋಬಂದ್, ಮುಜಾಫರ್'ನಗರದ ಎಲ್ಲಾ ಪಾಸ್'ಪೋರ್ಟ್'ಗಳ ತನಿಖೆಗೆ ಮುಂದಾದ ಸರ್ಕಾರ

ಉತ್ತರಪ್ರದೇಶ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗ ತೊಡಗಿರುವ ಹಿನ್ನಲೆಯಲ್ಲಿ ದಿಯೋಬಂದ್ ಹಾಗೂ ಮುಜಾಫರ್ ನಗರದ ಎಲ್ಲಾ ಪಾಸ್'ಪೋರ್ಟ್ ಗಳನ್ನು ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ...

ಮುಜಾಫರ್'ನಗರ: ಉತ್ತರಪ್ರದೇಶ ರಾಜ್ಯದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಾಗ ತೊಡಗಿರುವ ಹಿನ್ನಲೆಯಲ್ಲಿ ದಿಯೋಬಂದ್ ಹಾಗೂ ಮುಜಾಫರ್ ನಗರದ ಎಲ್ಲಾ ಪಾಸ್'ಪೋರ್ಟ್ ಗಳನ್ನು ಪರಿಶೀಲನೆ ನಡೆಸಲು ಸರ್ಕಾರ ಮುಂದಾಗಿದೆ ಎಂದು ವರದಿಗಳು ತಿಳಿಸಿವೆ. 

ಕೆಲ ದಿನಗಳ ಹಿಂದಷ್ಟೇ ಬಾಂಗ್ಲಾದೇಶ ಮೂಲದ ಇಬ್ಬರು ಶಂಕಿತ ಉಗ್ರರನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದರು. ವಿಚಾರಣೆ ವೇಳೆ ಉಗ್ರರು ದಿಯೋಬಂದ್ ವಿಳಾಸದಲ್ಲಿರುವ ಭಾರತದ ಪಾಸ್'ಪೋರ್ಟ್ ಗಳನ್ನು ತೋರಿಸಿದ್ದರು. 

ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ಮೂಲದ ಉಗ್ರರು ದಿಯೋಬಂದ್ ನಲ್ಲಿ ತಮ್ಮ ಚಟುವಟಿಕೆಗಳನ್ನು ನಡೆಸುತ್ತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ದಿಯೋಬಂದ್ ಹಾಗೂ ಮುಜಾಫರ್ ನಗರದಲ್ಲಿರುವ ಎಲ್ಲಾ ಪಾಸ್ ಪೋರ್ಟ್ ಗಳನ್ನು ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಉತ್ತರಪ್ರದೇಶ ಸರ್ಕಾರ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 

ದಿಯೋಬಂದ್ ಹಾಗೂ ಮುಜಾಫರ್ ನಗರದಲ್ಲಿ ಅಕ್ರಮವಾಗಿ ನೆಲೆಯೂರಿರುವ ಬಾಂಗ್ಲಾದೇಶಿಗರ ವಿರುದ್ಧ ಕ್ರಮಗೊಳ್ಳುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್'ಗಳಿಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ವರದಿಗಳು ತಿಳಿಸಿವೆ. ಅಲ್ಲದೆ, ಬಾಂಗ್ಲಾದೇಶ ರಾಷ್ಟ್ರೀಯರಿಗೆ ನಕಲಿ ಗುರುತಿನ ಚೀಟಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾಸಿಗೆ ಸೂಚಿಸಿದೆ ಎನ್ನಲಾಗಿದೆ. 

ದಿಯೋಬಂದ್ ಒಂದರಲ್ಲಿ ಮಾತ್ರವಲ್ಲದೆ ಮುಜಾಫರ್'ನಗರ ಮತ್ತು ಸಹರಾನ್ಪುರದಲ್ಲಿಯೂ ಉಗ್ರರ ಚಟುವಟಿಕೆಗಳು ಕಂಡುಬಂದಿದ್ದು, ಉತ್ತರಪ್ರದೇಶ ಇತರೆಡೆಯೂ ಪಾಸ್'ಪೋರ್ಟ್ ಗಳ ಪರಿಶೀಲನೆಗಳನ್ನು ನಡೆಸಲಾಗುತ್ತಿದೆ ಎಂದು ಸಹರಾನ್ಪುರ ಡಿಐಜಿ ಕೆ.ಎಸ್. ಎಮ್ಮಾನ್ಯುಯಲ್ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT