ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ 
ದೇಶ

ಸರ್ದಾರ್ ಪಟೇಲರ ಕೊಡುಗೆಯನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ: ಶೀಲಾ ದೀಕ್ಷಿತ್

ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್'ರ ಕೊಡುಗೆಗಳನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಹೇಳಿದ್ದಾರೆ...

ನವದೆಹಲಿ: ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್'ರ ಕೊಡುಗೆಗಳನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಮಂಗಳವಾರ ಹೇಳಿದ್ದಾರೆ. 
ಸರ್ದಾರ್ ಪಟೇಲ್ ಜನ್ಮದಿನ ನಿಮಿತ್ತ 'ರನ್ ಫಾರ್ ಯೂನಿಟಿ'ಗೆ ಚಾಲನೆ ನೀಡಿ ಮಾತನಾಡಿದ್ದ ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು, ಈ ಹಿಂದೆ ಇದ್ದ ಸರ್ಕಾರಗಳು ಉಕ್ಕಿನ ಮನುಷ್ಯ ಸರ್ದಾರ್ ಪಟೇಲರ ಪರಂಪರೆಯನ್ನು ನಿರ್ಲಕ್ಷಿಸಿದ್ದವು ಎಂದು ಹೇಳಿದ್ದರು. 
ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಶೀಲಾ ದೀಕ್ಷಿತ್ ಅವರು, ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್'ರ ಕೊಡುಗೆಗಳನ್ನು ಕಾಂಗ್ರೆಸ್ ಎಂದಿಗೂ ತಿರಸ್ಕರಿಸಿರಲಿಲ್ಲ. ಇತಿಹಾಸ ತಿಳಿದವರು ಹಾಗೂ ಓದಿರುವವರು ಪ್ರಧಾನಿ ಮೋದಿಯವರ ಹೇಳಿಕೆಯನ್ನು ಯಾರೂ ನಂಬುವುದಿಲ್ಲ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಎಂದಿಗೂ ಪಟೇಲರ ಪರಂಪರೆಯನ್ನು ತಿರಸ್ಕರಿಸರಲಿಲ್ಲ. ಪ್ರಧಾನಿ ಮೋದಿಯವರ ಹೇಳಿಕೆ ತಪ್ಪು. ದೇಶದ ಸ್ವಾತಂತ್ರ್ಯಕ್ಕೆ ಸರ್ದಾರ್ ಪಟೇಲರು ಹಾಗೂ ನೆಹರೂ ಇಬ್ಬರೂ ಕಾರಣಕರ್ತರಾಗಿದ್ದಾರೆ. ಇತಿಹಾಸ ಓದಿರುವವರಾಗರೂ ಮೋದಿಯವರ ಹೇಳಿಕೆಯನ್ನು ನಂಬುವುದಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ; ಡಿಕೆ ಶಿವಕುಮಾರ್

SCROLL FOR NEXT