ನಿತೀಶ್ ಕುಮಾರ್ 
ದೇಶ

2012 ರ ಕಳ್ಳಭಟ್ಟಿ ದುರಂತದ ಆರೋಪಿಯೊಂದಿಗೆ ನಿತೀಶ್ ಸೆಲ್ಫಿ: ಜೆಡಿ(ಯು) ಕೆಂಗಣ್ಣು

2012 ರ ಬಿಹಾರದಲ್ಲಿ ನಡೆದಿದ್ದ ಕಳ್ಳಭಟ್ಟಿ ದುರಂತದ ಆರೋಪಿ ರಾಕೇಶ್ ಸಿಂಗ್ ಸೆಲ್ಫಿಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಇರುವುದು ಜೆಡಿ(ಯು) ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ.

ಪಾಟ್ನಾ: 2012 ರ ಬಿಹಾರದಲ್ಲಿ ನಡೆದಿದ್ದ ಕಳ್ಳಭಟ್ಟಿ ದುರಂತದ ಆರೋಪಿ ರಾಕೇಶ್ ಸಿಂಗ್ ಸೆಲ್ಫಿಯಲ್ಲಿ ಬಿಹಾರ ಸಿಎಂ ನಿತೀಶ್ ಕುಮಾರ್ ಇರುವುದು ಜೆಡಿ(ಯು) ಪಕ್ಷದ ಕೆಂಗಣ್ಣಿಗೆ ಗುರಿಯಾಗಿದೆ. 
ರಾಕೇಶ್ ಸಿಂಗ್ ಕಳ್ಳಭಟ್ಟಿ ಪ್ರಕರಣದಲ್ಲಿ ಆರೋಪ ಹೊತ್ತಿದ್ದು, ಮಾದ್ಯ ಮಾಫಿಯಾದೊಂದಿಗೆ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಪಕ್ಷದ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿರುವುದಾಗಿ ಜೆಡಿಯು ತಿಳಿಸಿದೆ. ರಾಕೇಶ್ ಸಿಂಗ್ ನಿತೀಶ್ ಕುಮಾರ್ ಮನೆಗೆ ತೆರಳಿದ್ದಾಗ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿತೀಶ್ ಕುಮಾರ್, " ಶಿಕ್ಷಕರೊಬ್ಬರ ಜೊತೆಯಲ್ಲಿ ಸಿಂಗ್ ಬಂದಿದ್ದರು. ಈ ವ್ಯಕ್ತಿಯ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ, ಸೆಲ್ಫಿ ಕುರಿತು ಪ್ರಶ್ನೆಗಳು ಉದ್ಭವವಾಗುತ್ತಿದ್ದಂತೆಯೇ ನಾವು ಆತನಿಂದ ಅಂತರ ಕಾಯ್ದುಕೊಂಡಿದ್ದೇವೆ ಎಂದು ನಿತೀಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ. 
2012 ರಲ್ಲಿ ಕಳ್ಳಭಟ್ಟಿ ಸೇವಿಸಿ 29 ಜನರು ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT