ಬಂಧನ 
ದೇಶ

ಕೇರಳ: 3.25 ಕೋಟಿ ಹವಾಲ ಹಣದೊಂದಿಗೆ ಯುವಕರಿಬ್ಬರ ಬಂಧನ

ರು. 3.25 ಕೋಟಿ ಹವಾಲ ಹಣ ಹೊಂದಿದ್ದ ಇಬ್ಬರು ಯುವಕರನ್ನು ಕಣ್ಣೂರಿನ ತಲಸ್ಸೆರಿ ಬಳಿ ಪೊಲೀಸರು ಬಂಧಿಸಿದ್ದಾರೆ...

ಕಣ್ಣೂರ್(ಕೇರಳ): ರು. 3.25 ಕೋಟಿ ಹವಾಲ ಹಣ ಹೊಂದಿದ್ದ ಇಬ್ಬರು ಯುವಕರನ್ನು ಕಣ್ಣೂರಿನ ತಲಸ್ಸೆರಿ ಬಳಿ ಪೊಲೀಸರು ಬಂಧಿಸಿದ್ದಾರೆ. 
ಬೆಂಗಳೂರು ಸಿಟಿ-ಕಣ್ಣೂರು-ಯಶವಂತಪುರ ಎಕ್ಸ್ ಪ್ರೆಸ್ ರೈಲಿನಲ್ಲಿ 3.25 ಕೋಟಿ ರುಪಾಯಿ ಹವಾಲ ಹಣದೊಂದಿಗೆ ತೆರಳುತ್ತಿ ಇಕ್ಬಾಲ್ ಮತ್ತು ಮೊಹಮ್ಮದ್ ಶಕೀಲ್ ಎಂಬುವರನ್ನು ತಲಸ್ಸೆರಿ ರೇಲ್ವೆ ನಿಲ್ದಾಣದ ಬಳಿ ಪೊಲೀಸರು ಬಂಧಿಸಿದ್ದಾರೆ. 
ತಲಸ್ಸೆರಿ ಪೊಲೀಸ್ ಉಪ ಅಧೀಕ್ಷಕ ಅಬ್ರಹಾಂ ಮ್ತತು ರೈಲ್ವೆ ರಕ್ಷಣಾ ಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ಅವರಿಂದ 2000, 500 ಮತ್ತು 100 ರುಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಇನ್ನು ವಶಪಡಿಸಿಕೊಂಡಿರುವ ಹಣವನ್ನು ಡಿವೈಎಸ್ಪಿ ಅಬ್ರಹಾಂ ಜಾರಿ ನಿರ್ದೇಶನಾಯಕ್ಕೆ ಒಪ್ಪಿಸಿದ್ದಾರೆ. 
ಬೆಂಗಳೂರಿನಲ್ಲಿ ಚಿನ್ನದ ಆಭರಣಗಳ ಮಾರಾಟದ ಮೂಲಕ ಹಣವನ್ನು ಗಳಿಸಿರುವುದಾಗಿ ಪೊಲೀಸರಿಗೆ ಆರೋಪಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT