ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ 
ದೇಶ

ವ್ಯಾಪಂ ಹಗರಣ: ಸಿಎಂ ಶಿವರಾಜ್ ಸಿಂಗ್ ಚೌಹಾಣ್'ಗೆ ಕ್ಲೀನ್ ಚಿಟ್

ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ಮಂಗಳವಾರ ಕ್ಲೀನ್ ಚಿಟ್ ನೀಡಿದೆ...

ನವದೆಹಲಿ: ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ಮಂಗಳವಾರ ಕ್ಲೀನ್ ಚಿಟ್ ನೀಡಿದೆ. 
ವ್ಯಾಪಂ ಹಗರಣಕ್ಕೆ ಸಂಬಂಧಿಸಿದೆ ಸಿಬಿಐ ಆಧಿಕಾರಿಗಳು ಒಟ್ಟು 490 ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಪಟ್ಟಿಯಲ್ಲಿ ಶಿವರಾಜ್ ಸಿಂಗ್ ಅವರ ಹೆಸರನ್ನು ಕೈಬಿಟ್ಟಿದೆ. ಈ ಹಿನ್ನಲೆಯಲ್ಲಿ ಬಿಜೆಪಿ ತುಸು ನಿರಾಳ ದೊರಕಿದಂತಾಗಿದೆ. 
ಹಗರಣಕ್ಕೆ ಸಂಬಂಧಿಸಿದಂತೆ ವ್ಯಾಪಂ ಕಚೇರಿಯಿಂದ ವಶಪಡಿಸಿಕೊಂಡಿದ್ದ ಹಾರ್ಡ್ ಡಿಸ್ಕ್ ನಲ್ಲಿ ಮುಖ್ಯಮಂತ್ರಿ ಚೌಹಾಣ್ ಹೆಸರಿರಲಿಲ್ಲ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಅಲ್ಲದೆ, ಹಾರ್ಡ್ ಡಿಸ್ಕ್ ನ್ನು ತಿರುಚಲಾಗಿದೆ ಎಂಬ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯನ್ನು ತಿರಸ್ಕರಿಸಿದೆ. 
ವ್ಯಾಪಂ ಕಚೇರಿಯಿಂದ ಈ ಹಿಂದೆ ವಶಪಡಿಸಿಕೊಂಡ 3 ಕಂಪ್ಯೂಟರ್ ಗಳ ಹಾರ್ಡ್ ಡಿಸ್ಕ್ ಗಳನ್ನು ವಿಧಿವಿಜ್ಞಾನ ತಜ್ಞರು ಪರಿಶೀಲಿಸಿದ್ದಾರೆ. ಅದನ್ನು ತಿರುಚಲಾಗಿಲ್ಲ. ಇದ್ದಿದ್ದನ್ನು ಇರುವ ಹಾಗೆಯೇ ನಾವು ಭೋಪಾಲ್ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದೇವೆಂದು ಸಿಬಿಐ ತಿಳಿಸಿದೆ. 
2013ರಲ್ಲಿ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವಿದ್ದಾಗ ವ್ಯವಸಾಯಿಕ್ ಪರೀಕ್ಷಾ ಮಂಡಲ್/ವ್ಯಾಪಂ ನಡೆಸುವ ಪೂರ್ವ ವೈದ್ಯಕೀಯ ಪರೀಕ್ಷೆಯಲ್ಲಿ ಸುಮಾರು ರೂ.2000 ಕೋಟಿ ಭಾರೀ ಅಕ್ರಮ ನಡೆದಿತ್ತು. ಒಂದು ಪ್ರಶ್ನೆಪತ್ರಿಕೆಯನ್ನು ರೂ.5 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗಿತ್ತು. ಆಸನ ವ್ಯವಸ್ಥೆ, ಉತ್ತರ ಪತ್ರಿಕೆ ಅದಲು-ಬದಲು ಮಾಡಿ ಭಾರೀ ಅಕ್ರಮ ಎಸಗಲಾಗಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಹಗರಣದಲ್ಲಿ ಶಿವರಾಜ್ ಸಿಂಗ್ ಅವರ ಹೆಸರು ಬಲವಾಗಿ ಕೇಳಿಬಂದಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT