ಸಾಂದರ್ಭಿಕ ಚಿತ್ರ 
ದೇಶ

ಅರುಣಾಚಲ ಪ್ರದೇಶ-ಮ್ಯಾನ್ಮಾರ್ ಗಡಿ: ಸೇನಾ ಕಾರ್ಯಾಚರಣೆ, ಎನ್ಎಸ್ ಸಿಎನ್ ಕೇಡರ್ ಹತ್ಯೆ

ಅರುಣಾಚಲ ಪ್ರದೇಶದಲ್ಲಿ ಭಾರತ-ಮ್ಯಾನ್ಮಾರ್ ಗಡಿಭಾಗದಲ್ಲಿ ವಿಶೇಷ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ....

ನವದೆಹಲಿ: ಅರುಣಾಚಲ ಪ್ರದೇಶದಲ್ಲಿ ಭಾರತ-ಮ್ಯಾನ್ಮಾರ್ ಗಡಿಭಾಗದಲ್ಲಿ ವಿಶೇಷ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನ್ಯಾಶನಲ್ ಸೋಶಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ ಉಗ್ರಗಾಮಿ ಸಂಘಟನೆಯ ಕೇಡರ್ ಮೃತಪಟ್ಟಿದ್ದು ಮತ್ತೊಬ್ಬ ಸೈನಿಕ ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಎಕೆ-56 ಹಲ್ಲೆ ರೈಫಲ್, ಹ್ಯಾಂಡ್ ಗ್ರೆನೇಡ್, ಒಂದು ರೇಡಿಯೊ ಸೆಟ್, 200 ಸುತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ದಾಳಿ ಅರುಣಾಚಲ ಪ್ರದೇಶದ ಲಾಂಗ್ ಡಿಂಗ್ ಜಿಲ್ಲೆಯಲ್ಲಿ ನಡೆದಿದೆ.
ಭಾರತೀಯ ಸೇನಾ ಮೂಲಗಳ ಪ್ರಕಾರ, ಕಾರ್ಯಾಚರಣೆ ಇಂದು ಬೆಳಗ್ಗೆ 730ರ ಸುಮಾರಿಗೆ ನಡೆದಿದ್ದು ಇನ್ನು ಕೂಡ ಮುಂದುವರಿದಿದೆ.
ಕಾರ್ಯಾಚರಣೆ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸಿದ ಭಾರತೀಯ ಸೇನೆಯ ಮುಖ್ಯಸ್ಥ ಬಿಪಿನ್ ರಾವತ್, ಇದೊಂದು ಸಹಜ ದೈನಂದಿನ ಕಾರ್ಯಚರಣೆಯಾಗಿತ್ತು. ಇಂತಹ ಕಾರ್ಯಾಚರಣೆ ಪ್ರತಿದಿನ ನಡೆಯುತ್ತವೆ. ಇದರಲ್ಲೇನು ವಿಶೇಷವಿಲ್ಲ ಎನ್ನುತ್ತಾರೆ.
ಇದು ಗಡಿ ಭಾಗದ ಮಿಲಿಟರಿ ದಾಳಿ ಕೂಡ ಅಲ್ಲ ಎಂದು ಸೇನಾಪಡೆ ತಿಳಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT