ರಾಮ್ ರಹೀಮ್ ಬಂಧನದ ಬಳಿಕ ಡೇರಾ ಆಶ್ರಮದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಪೊಲೀಸರು 
ದೇಶ

ರಾಮ್ ರಹೀಮ್ ಬಂಧನದ ಬಳಿಕ ಡೇರಾ ಆಶ್ರಮದಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ ಪಡೆದ ಪೊಲೀಸರು

ಅತ್ಯಾಚಾರ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಬಳಿಕ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಜೈಲು ಸೇರಿದ ಬಳಿಕ ಡೇರಾ ಸಚ್ಚಾ ಸೌದ ಆಶ್ರಮದಲ್ಲಿ ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು...

ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಬಳಿಕ ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ಜೈಲು ಸೇರಿದ ಬಳಿಕ ಡೇರಾ ಸಚ್ಚಾ ಸೌದ ಆಶ್ರಮದಲ್ಲಿ ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ವರದಿಗಳು ತಿಳಿಸಿವೆ. 
ರಾಮ್ ರಹೀಮ್ ಬಂಧನದ ಬಳಿಕ ಆಗಸ್ಟ್ 25 ರಿಂದಲೂ ಸುಧೀರ್ಘವಾಗಿ ಆಶ್ರಮದ ಮೇಲೆ ದಾಳಿ ನಡೆಸಿರುವ ಹರಿಯಾಣ ಪೊಲೀಸರು ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ.
ಗುರ್ಮಿತ್ ಬಂಧನದ ಬಳಿಕ ಆಶ್ರಮದ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ 9ಎಂಎಂ ಪಿಸ್ತೂಲ್, ಡಬಲ್ ಬ್ಯಾರೆಲ್ ರೈಫಲ್ಸ್ ಗಳು, ಕಾರ್ಬೈನ್ ಗಳು ಹಾಗೂ ಸ್ಫೋಟಕ ವಸ್ತುಗಳು ಪಡೆದುಕೊಳ್ಳಲಾಗಿತ್ತು. ಡೇರಾ ಆಶ್ರಮದಲ್ಲಿಯೇ 3-4 ದಿನಗಲ ಕಾಲ ಉಳಿದುಕೊಳ್ಳಲಾಗಿತ್ತು. ಈ ವೇಳೆ ಕಾನೂನು ಕ್ರಮ ಎದುರುವುದಕ್ಕೂ ಮುನ್ನ ಎಲ್ಲಾ ಶಸ್ತ್ರಾಸ್ತ್ರಗಳನ್ನು ವಶಕ್ಕೆ ನೀಡುವಂತೆ ಗುರ್ಮಿತ್ ಬೆಂಬಲಿಗರಲ್ಲಿ ಮನವಿ ಮಾಡಲಾಗಿತ್ತು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಾಸಗಿ ಸುದ್ದಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ. 
ರಾಮ್ ರಹೀಮ್ ಬೆಂಬಲಿಗರಿಂದ ಮತ್ತಷ್ಟು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲು ಸಾಕಷ್ಟು ಅವಕಾಶಗಳಿತ್ತು. ಈಗಲೂ ಆಶ್ರಮದಲ್ಲಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ. ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡಿರುವ ಜನರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಗುರ್ಮಿತ್ ಸಂಬಂಧಿ ಭುಪೇಂದರ್ ಸಿಂಗ್ ಬಗ್ಗೆ ಮಾತನಾಡಿರುವ ಅವರು, ಡೇರಾದಲ್ಲಿರುವ ಎಲ್ಲಾ ಬೆಂಬಲಿಗರೂ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ. ಮಹಿಳಾ ಬೆಂಬಲಿಗರ ಬಳಿಯೂ ಶಸ್ತ್ರಾಸ್ತ್ರಗಳಿವೆ. ಭವಿಷ್ಯದಲ್ಲಿಯೂ ಈ ರೀತಿಯ ಕಾರ್ಯಾಚರಣೆಗಳನ್ನು ನಡೆಸಲಾಗುತ್ತದೆ. ಮತ್ತಷ್ಟು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗುತ್ತದೆ ಎಂದಿದ್ದಾರೆ. 
14,000 ದಿಂದ 20,000 ಹಸಿರು ಪಡೆ ಕಮಾಂಡೋಗಳು ಡೇರಾದಲ್ಲಿದ್ದು, ಶಸ್ತ್ರಾಸ್ತ್ರಗಳನ್ನು ಹೇಗೆ ಬಳಕೆ ಮಾಡಬೇಕೆಂಬುದರ ಬಗ್ಗೆ ಅವರಿಗೆ ತರಬೇತಿಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT