ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು 
ದೇಶ

ರೊಹಿಂಗ್ಯಾ ವಲಸಿಗರ ಗಡಿಪಾರು ಪ್ರಕರಣ: ಭಾರತ ಕಾನೂನಾತ್ಮಕವಾಗಿ ನಡೆಯಲಿದೆ- ರಿಜಿಜು

ರೊಹಿಂಗ್ಯಾ ವಲಸಿಗರ ಗಡಿಪಾರು ಕುರಿತಂತೆ ಭಾರತ ಕಾನೂನಾತ್ಮಕವಾಗಿ ನಡೆಯಲಿದ್ದು, ವಲಸಿಗರನ್ನು ಗಡಿಪಾರು ಮಾಡಲು ಸೇನಾ ಪಡೆಗಳನ್ನು ಬಳಕೆ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು...

ನವದೆಹಲಿ: ರೊಹಿಂಗ್ಯಾ ವಲಸಿಗರ ಗಡಿಪಾರು ಕುರಿತಂತೆ ಭಾರತ ಕಾನೂನಾತ್ಮಕವಾಗಿ ನಡೆಯಲಿದ್ದು, ವಲಸಿಗರನ್ನು ಗಡಿಪಾರು ಮಾಡಲು ಸೇನಾ ಪಡೆಗಳನ್ನು ಬಳಕೆ ಮಾಡುವುದಿಲ್ಲ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಮಂಗಳವಾರ ಹೇಳಿದ್ದಾರೆ. 
ರೊಹಿಂಗ್ಯಾ ವಲಸಿಗರ ಗಡಿಪಾರು ಪ್ರಕರಣ ಸಂಬಂಧ ಭಾರತದ ವಿರುದ್ಧ ಕೇಳಿ ಬರುತ್ತಿರುವ ವರದಿಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಭಾರತದಂತೆ ಇತರೆ ಯಾವುದೇ ದೇಶಗಳು ವಲಸಿಗರನ್ನು ಸ್ವೀಕರಿಸುವುದಿಲ್ಲ. ವಲಸಿಗರನ್ನು ಗಡಿಪಾರುವ ಮಾಡುವಾಗ ಭಾರತ ಸೇನಾ ಪಡೆಗಳನ್ನು ಬಳಕೆ ಮಾಡುವುದಿಲ್ಲ. ಕಾನೂನಾತ್ಮಕವಾಗಿ ನಡೆದುಕೊಳ್ಳಲಿದೆ ಎಂದು ಹೇಳಿದ್ದಾರೆ. 
ರೊಹಿಂಗ್ಯಾ ವಲಸಿಗರ ವಿಚಾರದಲ್ಲಿ ಭಾರತ ಅಮಾನವೀಯವಾಗಿ ಹಾಗೂ ಅಸಹಿಷ್ಣುತೆಯಿಂದ ವರ್ತಿಸುತ್ತಿದೆ ಎಂದು ಯಾವುದೇ ದೇಶ ಆರೋಪಿಸುವಂತಿಲ್ಲ. ವಲಸಿಗರನ್ನು ಕಾನೂತ್ಮಕವಾಗಿಯೇ ಗಡಿಪಾರು ಮಾಡಲಾಗುತ್ತದೆ. ಸೇನಾಪಡೆಗಳನ್ನು ಬಳಸಿ ಯಾರೊಬ್ಬರನ್ನು ಹೊರಗೆ ಹಾಕುವುದಿಲ್ಲ. ಭಾರತವನ್ನು ಅಮಾನವೀಯ ದೇಶವೆಂದು ಆರೋಪಿಸುತ್ತಿರುವುದು ತಪ್ಪು. ಭಾರತದಂತೆ ವಲಸಿಗರನ್ನು ಇನ್ನಾವುದೇ ದೇಶ ಸ್ವೀಕರಿಸುವುದಿಲ್ಲ ಎಂದು ತಿಳಿಸಿದ್ದಾರೆ. 
ಮ್ಯಾನ್ಮಾರ್ ನಲ್ಲಿ ಬೌದ್ಧ ಧರ್ಮೀಯರಿಂದ ರೊಹಿಂಗ್ಯಾ ಮುಸ್ಲಿಮರ ಹತ್ಯಾಕಾಂಡ ನಡೆಯುತ್ತಿದ್ದು, ಮಕ್ಕಳು, ಮಹಿಳೆಯರು ಎನ್ನದೆಯೇ ಅಮಾನವೀಯವಾಗಿ ಹತ್ಯೆ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. 
ಈ ನಡುವೆ ರೊಹಿಂಗ್ಯಾ ಮುಸ್ಲಿಂ ವಲಸಿಗರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮನ್ನು ಮ್ಯಾನ್ಮಾರ್ ಗೆ ಗಡಿಪಾರು ಮಾಡದಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?