ರಾಹುಲ್ ಗಾಂಧಿ 
ದೇಶ

ಬಿಜೆಪಿ-ಆರ್ ಎಸ್ ಎಸ್ ಸಿದ್ಧಾಂತಗಳ ಬಗ್ಗೆ ಮಾತನಾಡಿದರೆ ಕೊಲ್ಲುತ್ತಾರೆ: ರಾಹುಲ್ ಗಾಂಧಿ

ಹಿರಿಯ ಪತ್ರಕರ್ತೆ ಹಾಗೂ ವಿಚಾರವಾಗಿ ಹತ್ಯೆ ಸಂಬಂಧ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಿಡಿಕಾರಿದ್ದಾರೆ.

ನವದೆಹಲಿ: ಹಿರಿಯ ಪತ್ರಕರ್ತೆ ಹಾಗೂ ವಿಚಾರವಾದಿ ಹತ್ಯೆ ಸಂಬಂಧ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ  ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ರಾಹುಲಾ ಗಾಂಧಿ ಅವರು, "ಕರ್ನಾಟಕದಲ್ಲಿ ದಿಟ್ಟ ಪತ್ರಕರ್ತೆ, ನೇರ ನುಡಿಯ ಚಿಂತಕಿ ಗೌರಿ ಲಂಕೇಶ್‌ ರನ್ನು ಹತ್ಯೆ ಮಾಡಲಾಗಿದೆ. ಅಹಿಂಸೆಯೇ ಈ ದೇಶದ ಇತಿಹಾಸ. ಕೊಲೆಯನ್ನು ಯಾರೂ  ಸಮರ್ಥಿಸುವಂತಿಲ್ಲ. ಪ್ರಧಾನಿ ಮೋದಿ ಅವರೋರ್ವ ಕೌಶಲ ಹಿಂದೂ ರಾಜಕಾರಣಿ. ಮೋದಿ ಏನೇ ಹೇಳಿದರೂ ಅದರಲ್ಲಿ ಎರಡು ಅರ್ಥವಿರುತ್ತದೆ. ಪತ್ರಕರ್ತೆಯೊಬ್ಬಳು ಮತಾಂಧರಿಗೆ ಬಲಿಯಾಗಿರುವುದು ನಿಜಕ್ಕೂ ದೊಡ್ಡ  ದುರದೃಷ್ಟಕರ".
"ಜನ ಪ್ರಧಾನಿ ಮೋದಿ ಮೌನಿ ಎಂದು ಹೇಳುತ್ತಾರೆ. ಆದರೆ ಗಮನಿಸಬೇಕಾದ ಅಂಶವೆಂದರೆ ನರೇಂದ್ರ ಮೋದಿ ಅವರ ಒಟ್ಟಾರೆ ಚಿಂತನೆಯೇ ಜನರ ಧ್ವನಿಯನ್ನು ದಮನಿಸುವುದೇ ಆಗಿದೆ. ತಮ್ಮ ಮತ್ತು ತಮ್ಮ ಪಕ್ಷದ ವಿರುದ್ಧ  ಅಥವಾ ಆರ್ ಎಸ್ಎಸ್ ವಿರುದ್ಧ ಮಾತನಾಡದಂತೆ ಒತ್ತಡ ಹೇರುತ್ತಾರೆ. ಇಲ್ಲವಾದರೆ ಅವರನ್ನು ಕೊಲ್ಲುತ್ತಾರೆ. ಕೆಲವೊಮ್ಮೆ ಪ್ರಧಾನಿ ಮೋದಿ ಅವರು ಒತ್ತಡಕ್ಕೆ ಮಣಿದು ಮೌನ ಮುರಿಯುತ್ತಾರೆ; ಆದರೆ ಅವರ ಒಟ್ಟು ಮೌನದ  ಹಿಂದಿನ ಉದ್ದೇಶವೇ ಜನರ ಧ್ವನಿಯನ್ನು ದಮನಿಸುವುದು' ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT