ಸಂಗ್ರಹ ಚಿತ್ರ 
ದೇಶ

ಗೌರಿ ಲಂಕೇಶ್ ಹತ್ಯೆ: ರಾಜ್ಯ ಸರ್ಕಾರದಿಂದ ವರದಿ ಕೇಳಿದ ಕೇಂದ್ರ ಗೃಹ ಇಲಾಖೆ!

ಬೆಂಗಳೂರಿನಲ್ಲಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದಿಂದ ಬುಧವಾರ ವರದಿ ಕೇಳಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಬೆಂಗಳೂರಿನಲ್ಲಿ ಹತ್ಯೆಗೀಡಾದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದಿಂದ ಬುಧವಾರ ವರದಿ ಕೇಳಿದೆ ಎಂದು ತಿಳಿದುಬಂದಿದೆ.
ನಿನ್ನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ನಲ್ಲಿರುವ ತಮ್ಮ ನಿವಾಸದಲ್ಲೇ ಪತ್ರಕರ್ತೆ ಗೌರಿ ಲಂಕೇಳ್ ಅವರು ಹತ್ಯೆಗೀಡಾಗಿದ್ದು, ಈ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯ ಗೃಹ ಕಾರ್ಯದರ್ಶಿಗಳಿಂದ  ಮಾಹಿತಿ ಕೇಳಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ  ಸ್ವತಃ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯ ಗೃಹ ಕಾರ್ಯದರ್ಶಿಗಳಿಗೆ ಪತ್ರಬರೆದಿದ್ದು, ಹತ್ಯೆ ಸಂಬಂಧ ವರದಿ ನೀಡುವಂತೆ ಕೇಳಿದ್ದಾರೆ.
ಇನ್ನು ಗೌರಿ ಲಂಕೇಶ್ ಹತ್ಯೆ ಸಂಬಂಧ ಇಂದು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹತ್ಯೆ ಸಂಬಂಧ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ಇಬ್ಬರು ದುಷ್ಕರ್ಮಿಗಳು ಗೌರಿ ಲಂಕೇಶ್ ಅವರ ಮೇಲೆ  ದಾಳಿ ಮಾಡಿದ್ದಾರೆ. ಈ ಪೈಕಿ ಓರ್ವ ದುಷ್ಕರ್ಮಿ ಗೌರಿ ಅವರ ಮೇಲೆ ಗುಂಡು ಹಾರಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲಿಗೆ ಮನೆಗೆ ಬಂದ ಗೌರಿ ಅವರು ತಮ್ಮ ಗೇಟ್ ಒಂದು ಭಾಗವನ್ನು ತೆರೆದಿದ್ದಾರೆ. ಈ ವೇಳೆ ಕಪ್ಪು  ಬಣ್ಣದ ಹೆಲ್ಮೆಟ್ ತೊಟ್ಟಿದ್ದ ದುಷ್ಕರ್ಮಿ ಗೌರಿ ಅವರ ಮೇಲೆ ಗುಂಡು ಹಾರಿಸಿದ್ದಾನೆ.
ಗುಂಡು ಬೀಳುತ್ತಿದ್ದಂತೆಯೇ ಗೌರಿ ಲಂಕೇಶ್ ಅವರು ಮನೆಯೊಳೆಗೆ ಓಡಲು ಯತ್ನಿಸಿದ್ದು, ಮನೆ ಬಾಗಿಲ ಬಳಿ ಬಿದಿದ್ದಾರೆ. ನೆಲಕ್ಕುರುಳಿದ ಗೌರಿ ಅವರ ಮೇಲೆ ಮತ್ತೆ ದುಷ್ಕರ್ಮಿ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಎದೆ ಭಾಗಕ್ಕೆ,  ದೇಹದ ಸೊಂಟದ ಭಾಗಕ್ಕೆ ಗುಂಡುಗಳು ಹೊಕ್ಕಿವೆ. ಇವಿಷ್ಟೂ ದೃಶ್ಯಾವಳಿಗಳು ಮನೆಯಲ್ಲಿ ಅಳವಡಿಸಲಾಗಿದ್ದ 4 ಸಿಸಿಟಿವಿ ಕ್ಯಾಮೆರಾಗಳಿಂದ ಪತ್ತೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಅಂತೆಯೇ ಪ್ರಕರಣ ಸಂಬಂಧ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿರುವುದಾಗಿ ಸಿಎಂ ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT