ಶರದ್ ಯಾದವ್ 
ದೇಶ

ಶರದ್ ಯಾದವ್ ರಾಜ್ಯಸಭಾ ಸದಸ್ಯತ್ವ ರದ್ದುಗೊಳಿಸಿ: ಉಪ ರಾಷ್ಟ್ರಪತಿಗೆ ಜೆಡಿಯು ಮನವಿ

ಬಂಡಾಯ ನಾಯಕ ಶರದ್ ಯಾದವ್ ಅವರ ವಿರುದ್ಧ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಜೆಡಿಯು, ಪಕ್ಷದ ವಿರೋಧಿ ಚಟುವಟಿಕೆ...

ನವದೆಹಲಿ: ಬಂಡಾಯ ನಾಯಕ ಶರದ್ ಯಾದವ್ ಅವರ ವಿರುದ್ಧ ಮತ್ತೊಂದು ಕ್ರಮಕ್ಕೆ ಮುಂದಾಗಿರುವ ಜೆಡಿಯು, ಪಕ್ಷದ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಅವರ ರಾಜ್ಯಸಭಾ ಸದಸ್ಯತ್ವನ್ನು ರದ್ದುಗೊಳಿಸುವಂತೆ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಮನವಿ ಮಾಡಿದೆ.
ಜೆಡಿಯು ಹಿರಿಯ ಸಂಸದರಾದ ಆರ್ ಸಿಪಿ ಸಿಂಗ್ ಹಾಗೂ ಸಂಜಯ್ ಜಾ ಅವರು ರಾಜ್ಯಸಭಾ ಅಧ್ಯಕ್ಷರಾಗಿರುವ ಎಂ ವೆಂಕಯ್ಯ ನಾಯ್ಡು ಅವರು ಸುಮಾರು 100 ಪುಟಗಳ ಮನವಿಯೊಂದನ್ನು ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ಶರದ್ ಯಾದವ್ ಅವರನ್ನು ಪಕ್ಷದ ಸಂಸದೀಯ ನಾಯಕ ಸ್ಥಾನದಿಂದ ವಜಾಗೊಳಿಸಿದ್ದ ಜೆಡಿಯು ಈಗ ಅವರ ರಾಜ್ಯಸಭಾ ಸದಸ್ಯತ್ವವನ್ನೇ ಕಿತ್ತುಕೊಳ್ಳಲು ಮುಂದಾಗಿದೆ.
ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ಅವರು ಬಿಹಾರದಲ್ಲಿ ಆರ್ ಜೆಡಿ ಹಾಗೂ ಕಾಂಗ್ರೆಸ್ ನೊಂದಿಗೆ ಮೈತ್ರಿ ಮುರಿದುಕೊಂಡು ಬಿಜೆಪಿಯೊಂದಿಗೆ ಸರ್ಕಾರ ರಚಿಸಿರುವುದನ್ನು ಶರದ್ ಯಾದವ್ ಅವರು ಬಹಿರಂಗವಾಗಿಯೇ ವಿರೋಧಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT