ಜೆಎನ್ ಯು ವಿದ್ಯಾರ್ಥಿ ನಾಪತ್ತೆ ಪ್ರಕರಣ: ಸಿಬಿಐ ನಿಂದ ದೆಹಲಿ ಕೋರ್ಟ್ ಗೆ ವರದಿ ಸಲ್ಲಿಕೆ
ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ನಜೀಬ್ ಅಹ್ಮದ್ ಕಳೆದ ವರ್ಷ ಅಕ್ಟೋಬರ್ 15 ರಿಂದ ಕಾಣೆಯಾಗಿದ್ದು ಅವನನ್ನು ಪತ್ತೆಹಚ್ಚಲು ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ದೆಹಲಿ ಹೈಕೋರ್ಟ್ ಸಿಬಿಐಗೆ ಸೂಚನೆ ನೀಡಿದೆ.
ಜೆಎನ್ ಯು ವಿದ್ಯಾರ್ಥಿ ನಜೀಬ್ ಅಹ್ಮದ್ ನನ್ನು ಪತ್ತೆಹಚ್ಚಲು ತಾನು ತೆಗೆದುಕೊಂದ ಎಲ್ಲ ಕ್ರಮಗಳನ್ನು ವಿವರಿಸುವ ವರದಿಯನ್ನು ಕೇಂದ್ರೀಯ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಅಧಿಕಾರಿಗಳು ತೀರ್ಮಾನಕ್ಕೆ ಬರಲು ಹೆಚ್ಚು ಸಮಯ ಬೇಕೆಂದು ಕೋರಿದ್ದಾರೆ
ಮೊದಲ ವರ್ಷದ ಎಂ ಎಸ್ಸಿ ವಿದ್ಯಾರ್ಥಿಯಾಗಿದ್ದ ನಜೀಬ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಸದಸ್ಯರೊಂದಿಗೆ ಸಂಪರ್ಕ ಪಡೆದ ನಂತರ ಅಕ್ಟೋಬರ್ 14-15 ರ ರಾತ್ರಿ ತನ್ನ ಹಾಸ್ಟೆಲ್ ನಿಂದ ಕಾಣೆಯಾಗಿದ್ದು ಇನ್ನೂ ಪತ್ತೆಯಾಗಿಲ್ಲ..
ದೆಹಲಿ ಪೋಲೀಸರು ವಿದ್ಯಾರ್ಥಿ ಅಹ್ಮದ್ ನನ್ನು ಪತ್ತೆಹಚ್ಚುವಲ್ಲಿ ವಿಫಲರಾದ ಕಾರಣ ದೆಹಲಿ ಹೈ ಕೋರ್ಟ್ ಈ ಪ್ರಕರಣವನ್ನು ಸಿಬಿಐ ಗೆ ವರ್ಗಾಯಿಸಿತ್ತು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos