ತಿನ್ ಗಡ್ಕರಿ 
ದೇಶ

ನದಿ ಜೋಡಣೆ: ಮುಖ್ಯಮಂತ್ರಿಗಳ ಸಭೆ ಕರೆಯಲು ನಿತಿನ್ ಗಡ್ಕರಿ ನಿರ್ಧಾರ

ನದಿ ಜೋಡಣೆ ಸಂಬಂಧ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪ್ರಾರಂಭಿಸಬೇಕೆಂದು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ

ನವದೆಹಲಿ: ನದಿ ಜೋಡಣೆ ಸಂಬಂಧ ಯೋಜನೆಗಳನ್ನು ಶೀಘ್ರಗತಿಯಲ್ಲಿ ಪ್ರಾರಂಭಿಸಬೇಕೆಂದು ಕೇಂದ್ರ ಜಲ ಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಮಂಗಳವಾರ ಹೇಳಿದ್ದಾರೆ ಎನ್ ಡಿಎ ಸರ್ಕಾರದ ಪ್ರಮುಖ ಯೋಜನೆ ಕುರಿತು ಚರ್ಚೆ ನಡೆಸಲು ಮುಖ್ಯಮಂತ್ರಿಗಳ ಸಭೆ ಕಕರೆಯಲು ಅವರು ನಿರ್ಧರಿಸಿದ್ದಾರೆ.
ಜಲ ಸಂಪನ್ಮೂಲಗಳ ಸಚಿವಾಲಯ ಕೆಲಸವನ್ನು ಪರಿಶೀಲಿಸಿದ ಗಡ್ಕರಿ, ಮೂರು ನದಿ ಜೋಡಣೆ ಯೋಜನೆಗಳಾದ ಕೆನ್-ಬೆಟ್ವಾ, ದಮಾಂಗಂಗಾ-ಪಿಂಜಲ್ ಮತ್ತು ಪರ್-ತಪಿ-ನರ್ಮದಾಗಳನ್ನು ತಕ್ಷಣದ ಪ್ರಾರಂಭಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನದಿ ಜೋಡಣೆಯು ದೇಶದ ವಿವಿಧ ಭಾಗಗಳಲ್ಲಿ ಪ್ರವಾಹ ಮತ್ತು ಬರಗಾಲದ ಸಮಸ್ಯೆಯನ್ನು ಪರಿಹರಿಸಲಿದೆಎಂದು ಗಡ್ಕರಿ ಹೇಳಿದರು.
"ಅಟಲ್ ಜಿ ಕನಸನ್ನು ನನಸಾಗಿಸಲು ಮತ್ತು ನದಿಗಳ ಜೋಡಣೆ ಅನ್ನು ತ್ವರಿತಗೊಳಿಸಲು ನಾನು ನಿರ್ಧರಿಸಿದ್ದೇನೆ. ಬಾಕಿ ಉಳಿದಿರುವ ನದಿ ನೀರು ವಿವಾದಾಂಶಗಳನ್ನು ಬಗೆಹರಿಸಲು ನಾನು ಮುಖ್ಯಮಂತ್ರಿಗಳ ಸಭೆ ಕರೆಯಲಿದ್ದೇನೆ ಎಂದು ಗಡ್ಕರಿ ತಿಳಿಸಿದ್ದಾರೆ.
ದೇಶದ ಮೊದಲ ಕೆನ್-ಬೆಟ್ವಾ ನದಿ ಜೋಡಣೆ ಯೋಜನೆಯನ್ನು ಮಧ್ಯ ಪ್ರದೇಶದಲ್ಲಿ ಪ್ರಾರಂಭಿಸಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT