ಸರ್ವೋಚ್ಚ ನ್ಯಾಯಾಲಯ 
ದೇಶ

ಗೋ ರಕ್ಷಣೆ ಹೆಸರಿನ ಹಿಂಸಾಚಾರ: ನೋಡೆಲ್ ಅಧಿಕಾರಿಗಳನ್ನು ನೇಮಿಸಲು ರಾಜ್ಯಗಳಿಗೆ ಸು.ಕೋರ್ಟ್ ನಿರ್ದೇಶನ

ಹಿರಿಯ ಓರ್ವ ಪೊಲೀಸ್ ಅಧಿಕಾರಿಯನ್ನು ಪ್ರತಿ ಜಿಲ್ಲೆಯ ನೋಡೆಲ್ ಅಧಿಕಾರಿಯಾಗಿ ನೇಮಕಗೊಳಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ನವದೆಹಲಿ: ಹಿರಿಯ ಓರ್ವ ಪೊಲೀಸ್ ಅಧಿಕಾರಿಯನ್ನು ಪ್ರತಿ ಜಿಲ್ಲೆಯ ನೋಡೆಲ್ ಅಧಿಕಾರಿಯಾಗಿ ನೇಮಕಗೊಳಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠವು ಪ್ರತಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ನಿರ್ದೇಶನ ನೀಡುವಂತೆ ಆದೇಶಿಸಿತು. ಗೋ ರಕ್ಷಣೆ ಸಂಬಂಧಿ ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂದ ಕ್ರಮಗಳನ್ನು ವಿವರವಾಗಿ ವರದಿ ಮಾಡುವಂತೆ ಪೀಠ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಅಮಿತಾವ ರಾಯ್ ಮತ್ತು ಎ ಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರ ಸಂವಿಧಾನದ 256 ನೇ ವಿಧಿಯಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಿರ್ದೇಶನ ನೀಡಬೇಕೆಂದು ಹೇಳಿದೆ.
ಮಹಾತ್ಮ ಗಾಂಧಿಯವರ ಮೊಮ್ಮಗನಾದ ತುಶಾರ್ ಗಾಂಧಿಯವರು ಸಲ್ಲಿಸಿದ ಪಿಎಲ್ಐ ವಿಚಾರಣೆ ನಡೆಸಿದ ನ್ಯಾಯಾಲಯ ಗೋ ರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲು ಎಲ್ಲ ಸರ್ಕಾರಗಳಿಗೆ ನಿರ್ದೇಶನ ನೀಡಿ ಆದೇಶ ಮಾಡಿದೆ.
ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ಅವರು ತುಷಾರ್ ಗಾಂಧಿಯವರ ಪರ ವಾದ ಮಂಡಿಸಿದ್ದು ಗೋಮಾಂಸ ಸಾಗಣೆ ವಿಚಾರದಲ್ಲಿ ದೇಶದಾದ್ಯಂತ ನಡೆಯುತ್ತಿರುವ ಹಿಂಸೆಯ ಕುರಿತು ಕಳವಳ ವ್ಯಕ್ತಪಡಿಸಿದರು.
ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರ ಈ ಹಿಂದಿನ ಹೇಳಿಕೆಯನ್ನು ಸಹ ಉಲ್ಲೇಖಿಸಿದ ಅವರು, ಕೇಂದ್ರ ಸರ್ಕಾರ ಕಾನೂನು ಕೈಗೆತ್ತಿಕೊಳ್ಳುವವರ ಪರ ವಹಿಸಬಾರದು ಎಂದರು.
ಗಾಂಧಿಯವರಲ್ಲದೆ, ಕಾಂಗ್ರೆಸ್ ನಾಯಕ ತಹಸೀನ್ ಪೂನವಾಲಾ ಸಹ ಈ ವಿಚಾರವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT