ಸರ್ವೋಚ್ಚ ನ್ಯಾಯಾಲಯ 
ದೇಶ

ಗೋ ರಕ್ಷಣೆ ಹೆಸರಿನ ಹಿಂಸಾಚಾರ: ನೋಡೆಲ್ ಅಧಿಕಾರಿಗಳನ್ನು ನೇಮಿಸಲು ರಾಜ್ಯಗಳಿಗೆ ಸು.ಕೋರ್ಟ್ ನಿರ್ದೇಶನ

ಹಿರಿಯ ಓರ್ವ ಪೊಲೀಸ್ ಅಧಿಕಾರಿಯನ್ನು ಪ್ರತಿ ಜಿಲ್ಲೆಯ ನೋಡೆಲ್ ಅಧಿಕಾರಿಯಾಗಿ ನೇಮಕಗೊಳಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ನವದೆಹಲಿ: ಹಿರಿಯ ಓರ್ವ ಪೊಲೀಸ್ ಅಧಿಕಾರಿಯನ್ನು ಪ್ರತಿ ಜಿಲ್ಲೆಯ ನೋಡೆಲ್ ಅಧಿಕಾರಿಯಾಗಿ ನೇಮಕಗೊಳಿಸುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರ ನೇತೃತ್ವದ ಪೀಠವು ಪ್ರತಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಈ ನಿರ್ದೇಶನ ನೀಡುವಂತೆ ಆದೇಶಿಸಿತು. ಗೋ ರಕ್ಷಣೆ ಸಂಬಂಧಿ ಘಟನೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಂದ ಕ್ರಮಗಳನ್ನು ವಿವರವಾಗಿ ವರದಿ ಮಾಡುವಂತೆ ಪೀಠ ಆದೇಶಿಸಿದೆ.
ನ್ಯಾಯಮೂರ್ತಿಗಳಾದ ಅಮಿತಾವ ರಾಯ್ ಮತ್ತು ಎ ಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಪೀಠವು ಕೇಂದ್ರ ಸರ್ಕಾರ ಸಂವಿಧಾನದ 256 ನೇ ವಿಧಿಯಡಿಯಲ್ಲಿ ರಾಜ್ಯ ಸರ್ಕಾರಗಳಿಗೆ ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ನಿರ್ದೇಶನ ನೀಡಬೇಕೆಂದು ಹೇಳಿದೆ.
ಮಹಾತ್ಮ ಗಾಂಧಿಯವರ ಮೊಮ್ಮಗನಾದ ತುಶಾರ್ ಗಾಂಧಿಯವರು ಸಲ್ಲಿಸಿದ ಪಿಎಲ್ಐ ವಿಚಾರಣೆ ನಡೆಸಿದ ನ್ಯಾಯಾಲಯ ಗೋ ರಕ್ಷಣೆ ಹೆಸರಲ್ಲಿ ನಡೆಯುವ ಹಿಂಸಾಚಾರ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳಲು ಎಲ್ಲ ಸರ್ಕಾರಗಳಿಗೆ ನಿರ್ದೇಶನ ನೀಡಿ ಆದೇಶ ಮಾಡಿದೆ.
ಹಿರಿಯ ನ್ಯಾಯವಾದಿ ಇಂದಿರಾ ಜೈಸಿಂಗ್ಅವರು ತುಷಾರ್ ಗಾಂಧಿಯವರ ಪರ ವಾದ ಮಂಡಿಸಿದ್ದು ಗೋಮಾಂಸ ಸಾಗಣೆ ವಿಚಾರದಲ್ಲಿ ದೇಶದಾದ್ಯಂತ ನಡೆಯುತ್ತಿರುವ ಹಿಂಸೆಯ ಕುರಿತು ಕಳವಳ ವ್ಯಕ್ತಪಡಿಸಿದರು.
ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ಅವರ ಈ ಹಿಂದಿನ ಹೇಳಿಕೆಯನ್ನು ಸಹ ಉಲ್ಲೇಖಿಸಿದ ಅವರು, ಕೇಂದ್ರ ಸರ್ಕಾರ ಕಾನೂನು ಕೈಗೆತ್ತಿಕೊಳ್ಳುವವರ ಪರ ವಹಿಸಬಾರದು ಎಂದರು.
ಗಾಂಧಿಯವರಲ್ಲದೆ, ಕಾಂಗ್ರೆಸ್ ನಾಯಕ ತಹಸೀನ್ ಪೂನವಾಲಾ ಸಹ ಈ ವಿಚಾರವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT