ಸಂಗ್ರಹ ಚಿತ್ರ 
ದೇಶ

ಗೌರಿ ಲಂಕೇಶ್ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ: ರಾಹುಲ್ ಗಾಂಧಿ

ಗೌರಿ ಲಂಕೇಶ್ ಅವರ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಖಂಡಿತ ಅವರ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಗೌರಿ ಲಂಕೇಶ್ ಅವರ ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಖಂಡಿತ ಅವರ ಸಾವಿಗೆ ಕಾರಣರಾದ ದುಷ್ಕರ್ಮಿಗಳನ್ನು ಕಾನೂನಾತ್ಮಕವಾಗಿ ಶಿಕ್ಷಿಸಲಾಗುತ್ತದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಟ್ವೀಟರ್ ನಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಹತ್ಯೆ ಮೂಲಕ ಸತ್ಯವನ್ನು ಮೌನವಾಗಿಸಲು ಸಾಧ್ಯವಿಲ್ಲ. ಗೌರಿ ಲಂಕೇಶ್ ನಮ್ಮ ಮನದಲ್ಲಿದ್ದು, ದೇವರು ಅವರ ಕುಟುಂಬಸ್ಥರಿಗೆ ಗೌರಿ ಲಂಕೇಶ್ ಅವರ ಸಾವಿನ ನೋವನ್ನು ತಡೆದುಕೊಳ್ಳು ಶಕ್ತಿ ನೀಡಲಿ. ತಪ್ಪಿತಸ್ಥಿರಿಗೆ ಖಂಡಿತಾ ಶಿಕ್ಷೆಯಾಗಬೇಕು ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಪಕ್ಷದ ಮತ್ತೋರ್ವ ಮುಖಂಡ ಕಪಿಲ್ ಸಿಬಲ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವಿಚಾರವಾದಿ ಗೌರಿ ಲಂಕೇಶ್ ರನ್ನು ಗುಂಡೇಟಿನ ಮೂಲಕ ಮೌನವಾಗಿಸಲಾಗಿದೆ. ಅವರ ಹತ್ಯೆ ಮೂಲಕ ವಿರುದ್ಧದ ಮನೋಭಾವಗಳನ್ನು ತಣ್ಣಗಾಗಿಸುವ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT