ಅರ್ವಾಲಾ(ಬಿಹಾರ): ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬೆನ್ನಲ್ಲೇ ಬಿಹಾರದ ಹಿಂದಿ ಪತ್ರಿಕೆ ರಾಷ್ಟ್ರೀಯ ಸಹಾರಾದ ಪತ್ರಕರ್ತ ಪಂಕಜ್ ಮಿಶ್ರಾ ಎಂಬುವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಬ್ಯಾಂಕ್ ತೆರಳಿದ್ದ ಪಂಕಜ್ ಮಿಶ್ರಾ ಅವರು ಅಲ್ಲಿಂದ ಮನೆಗೆ ತೆರಳುತ್ತಿದ್ದಾಗ ಎರಡು ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಮಿಶ್ರಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಪರಿಸ್ಥಿತಿ ಗಂಭೀರವಾಗಿದೆ.
ಪಂಕಜ್ ಮಿಶ್ರಾ ಮೇಲಿನ ಗುಂಡಿನ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಅರ್ವಾಲಾದ ಎಸ್ಪಿ ದಿಲೀಪ್ ಕುಮಾರ್ ಅವರು ವೈಯ್ಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಿಶ್ರಾ ಅವರ ಮೇಲೆ ದಾಳಿಯಾಗಿದೆ. ಈ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದರು.