ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜಸ್ವಿ ಯಾವದ್ (ಸಂಗ್ರಹ ಚಿತ್ರ) 
ದೇಶ

ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ: ಲಾಲೂ, ತೇಜಸ್ವಿ ಯಾದವ್'ಗೆ ಸಮನ್ಸ್ ಜಾರಿ ಮಾಡಿದ ಸಿಬಿಐ

ಹೋಟೆಲ್'ಗಳ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೇ ಸಚಿವ ಹಾಗೂ ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜಸ್ವಿ ಯಾವದ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಗುರುವಾರ...

ನವದೆಹಲಿ: ಹೋಟೆಲ್'ಗಳ ಗುತ್ತಿಗೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ರೈಲ್ವೇ ಸಚಿವ ಹಾಗೂ ಆರ್'ಜೆಡಿ ಮುಖಂಡ ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜಸ್ವಿ ಯಾವದ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಗುರುವಾರ ಸಮನ್ಸ್ ಜಾರಿ ಮಾಡಿದೆ. 
ಹೋಟೆಲ್ ಗುತ್ತಿಗೆಯಲ್ಲಿ ಅಕ್ರಮ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11 ರಂದು ತನಿಖಾ ದಳದ ಮುಖ್ಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಲಾಲೂಗೆ ತಿಳಿಸಲಾಗಿದೆ.
ಇದರಂತೆ ಪ್ರಕರಣ ಸಂಬಂಧ ಲಾಲೂ ಪುತ್ರ ತೇಜಸ್ವಿ ಯಾದವ್ ಅವರಿಗೂ ಸಿಬಿಐ ಸಮನ್ಸ್ ಜಾರಿ ಮಾಡಿದ್ದು, ಸೆಪ್ಟೆಂಬರ್ 12ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ ಎಂದು ತಿಳಿದುಬಂದಿದೆ. 
ಹೋಟೆಲ್ ಗಳ ಗುತ್ತಿಗೆಯಲ್ಲಿ ಅಕ್ರಮ ನಡೆಸಿದ್ದಾರೆಂಬ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಲಾಲೂ ಅವರ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಇಂಚಿಂಚೂ ಶೋಧ ನಡೆಸಿದ್ದರು. 
ಲಾಲು ಪ್ರಸಾದ್ ಯಾದವ್, ಪತ್ನಿ ರಾಬ್ರಿ ದೇವಿ, ಪುತ್ರ ಬಿಹಾರ ಡಿಸಿಎಂ ತೇಜಸ್ವಿ, ಎಂಡಿ. ಪಿ.ಕೆ. ಗೋಯಲ್, ಲಾಲೂ ಅವರ ಆಪ್ತ ಗೆಳೆಯ ಪ್ರೇಮ್ ಚಂದ್ರ ಗುಪ್ತಾ ಪತ್ನಿ ಸುಜಾತಾ ಮತ್ತಿತರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದ ಸಿಬಿಐ ಅಧಿಕಾರಿಗಳು, ಏಕಕಾಲದಲ್ಲಿ ದೆಹಲಿ, ಪಾಟ್ನಾ, ರಾಂಚಿ, ಪುರಿ, ಗುರ್ ಗಾಂವ್ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. 
2006ರಲ್ಲಿ ಬಿಎನ್ ಆರ್ ಹೋಟೆಲ್ ಗಳ ನಿರ್ವಹಣೆಗೆ ಸುಜಾತಾ ಹೋಟೆಲ್ ಗಳಿಗೆ ನೀಡಿದ್ದ ಗುತ್ತಿಗಯಲ್ಲಿ ಅಕ್ರಮ ನಡೆಸಲಾಗಿದೆ ಎಂಬ ಆರೋಪ ಲಾಲೂ ಪ್ರಸಾದ್ ವಿರುದ್ದ ಕೇಳಿ ಬಂದಿತ್ತು. ಸುಜಾತಾ ಹೋಟೆಲ್ ಗಳನ್ನು ಐಆರ್ ಸಿಟಿಸಿ ಮತ್ತು ಸಾರ್ವಜನಿಕ ರೈಲ್ವೇ ಇಲಾಖೆ ಪ್ರಸಕ್ತ ವರ್ಷಾರಂಭದಲ್ಲಿ ತನ್ನ ಅಧೀನಕ್ಕೆ ಪಡೆದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!

ನಿಂಬೆಹಣ್ಣು ಕತ್ತರಿಸಿ, ಮಳೆ ನಿಲ್ಲಿಸಿದೆ: ವಿವಾದವನ್ನು ಮೈ ಮೇಲೆ ಎಳೆದುಕೊಂಡ ಬಿಜೆಪಿ ಸಂಸದ! ಕಾಂಗ್ರೆಸ್, ನೆಟ್ಟಿಗರ ಲೇವಡಿ