ಭಾರತದ ಸುಪ್ರೀಂಕೋರ್ಟ್ 
ದೇಶ

ಅರುಣ್ ಜೇಟ್ಲಿ ಮಾನನಷ್ಟ ಪ್ರಕರಣ: ಎಎಪಿ ನಾಯಕನ ಮನವಿ ಪುರಸ್ಕರಿಸಿದ ಸುಪ್ರೀಂ ಕೋರ್ಟ್

ಕೇಂದ್ರ ಸಚಿವ ಅರುಣ್ ಜೇಟ್ಲಿಯ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಟ್ವೀಟ್ ನ್ನು ರಿಟ್ವೀಟ್ ಮಾಡಿದ ಕಾರನಕ್ಕೆ ತಾನು ಮಾನನಷ್ಟ ಮೊಕದ್ದಮೆಯನ್ನು ಎದುರಿಸಬೇಕಾಗಿ ಬಂದಿದೆ

ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿಯ ವಿರುದ್ಧ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಟ್ವೀಟ್ ನ್ನು ರಿಟ್ವೀಟ್ ಮಾಡಿದ ಕಾರನಕ್ಕೆ ತಾನು ಮಾನನಷ್ಟ ಮೊಕದ್ದಮೆಯನ್ನು ಎದುರಿಸಬೇಕಾಗಿ ಬಂದಿದೆ ಎಂದು ಎಎಪಿ ನಾಯಕ ರಾಘವ್ ಚಾಧಾ ಮಾಡಿಕೊಂದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ಒಪ್ಪಿಕೊಂಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಮತ್ತು ನ್ಯಾಯಮೂರ್ತಿಗಳಾದ ಅಮಿತಾ ರಾಯ್ ಮತ್ತು ಎ.ಎಂ ಖಾನ್ವಿಲ್ಕರ್ ಅವರನ್ನೊಳಗೊಂಡ ಪೀಠವು ಆಮ್ ಆದ್ಮಿ ಪಕ್ಷದ ವಕ್ತಾರರಾದ ಚಧಾ ಅವರ ಅರ್ಜಿಯನ್ನು ತುರ್ತು ವಿಚಾರಣೆಗಾಗಿ ಪರಿಗಣಿಸಿದೆ. ಸೋಮವಾರದಿಂದ ಈ ಅರ್ಜಿಯ ವಿಚಾರಣೆ ಪ್ರಾರಂಭಿಸುವುದಾಗಿ ಪೀಠ ತಿಳಿಸಿದೆ.
ಹಿರಿಯ ವಕೀಲರಾದ ಆನಂದ್ ಗ್ರೋವರ್, ಚಾಧ ಅವರ ಪರವಾಗಿ ವಾದಿಸುತ್ತಾ, ಅರವಿಂದ ಕೇಜ್ರಿವಾಲ್ ರ ಕೆಲವು ಟ್ವೀಟ್ಗಳನ್ನು ಇವರು ರಿಟ್ವೀಟ್ ಮಾಡಿದ ಕಾರಣದಿಂದಾಗಿ ಈ ಪ್ರಕರಣದಲ್ಲಿ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದೆ ಎಂದು ಆಪಾದಿಸಿದರು. 
"ಈ ಪ್ರಕರಣದಲ್ಲಿ ಮಾನನಷ್ಟ ಮೊಕದ್ದಮೆ ಹೂಡುವ ಯಾವ ಅಂಶಗಳೂ ಇಲ್ಲ"ವೆಂದು ಗ್ರೋವರ್ ವಾದಿಸಿದರು. ಕೋರ್ಟ್ ಅದನ್ನು ಸೋಮವಾರ ಪರಿಶೀಲಿಸಲಿದೆ ಎಂದು ನ್ಯಾಯ ಪೀಠವು ಪುನರುಚ್ಚರಿಸಿತು.
ಕೇಜ್ರಿವಾಲ್ ಮತ್ತು ಇತರ ಎಎಪಿ ಮುಖಂಡರಾದ ರಾಘವ್ ಚಧಾ, ಕುಮಾರ್ ವಿಶ್ವಾಸ್, ಅಶುತೋಷ್, ಸಂಜಯ್ ಸಿಂಗ್ ಮತ್ತು ದೀಪಕ್ ಬಾಜ್ಪಾಯಿ ಅವರುಗಳು ಅರುಣ್ ಜೇಟ್ಲಿ ಭ್ರಷ್ಠಾಚಾರದಲ್ಲಿ ಪಾಲ್ಗೊಂಡಿದ್ದಾರೆಂದು ಆರೋಪಿಸಿ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಆಕ್ಷೇಪಾರ್ಹ ಟ್ವೀಟ್ ಮಾಡುತ್ತಿದ್ದರು. 2000 ನಿಂದ 2013ರ ವರೆಗಿನ ಕಾಲಾವಧಿಯಲ್ಲಿ ಅವರು ಮಾಡಿದ್ದ ಟ್ವೀಟ್ ಗಳನ್ನು ಪರಿಗಣಿಸಿ ಅರುಣ್ ಜೇಟ್ಲಿ ಎಎಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT