ಡೇರಾ ಆಶ್ರಮ 
ದೇಶ

ಡೇರಾದಲ್ಲಿ ಐಷಾರಾಮಿ ಕಾರು, ಹಳೆ ನೋಟ್ ಜಪ್ತಿ, ರೂಮ್ ಗಳಿಗೆ ಬೀಗ ಜಡಿದ ಅಧಿಕಾರಿಗಳು

ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ರಾಮ್ ರಹೀಮ್ ಗುರ್ಮಿತ್ ಸಿಂಗ್ ರ ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌಧದ ಆಶ್ರಮದಲ್ಲಿ ...

ಚಂಡೀಗಢ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬಾಬಾ ರಾಮ್ ರಹೀಮ್ ಗುರ್ಮಿತ್ ಸಿಂಗ್ ರ ಸಿರ್ಸಾದಲ್ಲಿರುವ ಡೇರಾ ಸಚ್ಚಾ ಸೌಧದ ಆಶ್ರಮದಲ್ಲಿ ನೋಂದಣಿಯಾಗದ ಐಷಾರಾಮಿ ಕಾರು ಹಾಗೂ ನಿಷೇಧಿತ ನೋಟ್ ಗಳನ್ನು ಜಪ್ತಿ ಮಾಡಲಾಗಿದೆ. ಅಲ್ಲದೆ ಅಲ್ಲಿನ ಕೆಲವು ರೂಮ್ ಗಳಿಗೆ ಬೀಗ ಜಡಿದಿರುವುದಾಗಿ ಶುಕ್ರವಾರ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಡೇರಾ ಆಶ್ರಮದ ಮೇಲೆ ದಾಳಿ ನಡೆಸಿದ್ದ ಜಿಲ್ಲಾಡಳಿತ ಹಾಗೂ ಭದ್ರತಾ ಪಡೆಗಳು, ಹೈಕೋರ್ಟ್ ಆದೇಶದಂತೆ ಆಶ್ರಮದಲ್ಲಿ ಶೋಧಕಾರ್ಯ ನಡೆಸಿದವು. ಈ ವೇಳೆ ನೋಂದಣಿಯಾಗದ ಐಷಾರಾಮಿ ಕಾರೊಂದು ಹಾಗೂ ನಿಷೇಧಿತ ನೋಟ್ ಗಳು ಪತ್ತೆಯಾಗಿದ್ದು, ಅವುಗಳನ್ನು ಜಪ್ತಿ ಮಾಡಲಾಗಿದೆ ಎಂದು ಹರಿಯಾಣ ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಸತೀಶ್ ಮೆಹ್ರಾ ಅವರು ಹೇಳಿದ್ದಾರೆ.
ಆಶ್ರಮದಲ್ಲಿನ ಕೆಲವು ರೂಮ್ ಗಳಿಗೆ ಬೀಗ್ ಜಡಿಯಲಾಗಿದೆ. ಕಂಪ್ಯೂಟರ್ ಹಾರ್ಡ್ ಡಿಸ್ಕ್, ನೋಂದಣಿಯಾಗದ ಕಾರು, ಒಬಿ ವ್ಯಾನ್, 7 ಸಾವಿರ ರುಪಾಯಿ ಮೌಲ್ಯದ ನಿಷೇಧಿತ ನೋಟ್ ಹಾಗೂ 12 ಸಾವಿರ ರುಪಾಯಿ ನಗದು ಮತ್ತು ಲೇಬಲ್ ಇಲ್ಲದ ಕೆಲವು ಔಷಧಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಮೆಹ್ರಾ ಅವರು ತಿಳಿಸಿದ್ದಾರೆ.
ಪೊಲೀಸರು ಮತ್ತು ಸೇನಾಪಡೆಯ ಭಾರಿ ಭದ್ರತೆಯೊಂದಿಗೆ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಡೇರಾ ಸಚ್ಚಾ ಸೌದದ ಆಶ್ರಮವನ್ನು ಶೋಧಿಸಿದ್ದಾರೆ. ಇದಲ್ಲದೇ ಆಶ್ರಮಕ್ಕೆ ಬಾಂಬ್ ನಿಷ್ಕ್ರಿಯ ದಳಗಳು ಹಾಗೂ  ಶ್ವಾನದಳಗಳೂ ಕೂಡ ಪ್ರವೇಶ ಮಾಡಿದ್ದವು. 
ಇನ್ನು ಆಶ್ರಮದಲ್ಲಿ ಶೋಧ ಕಾರ್ಯ ನಡೆಸುತ್ತಿರುವ ಹಿನ್ನಲೆಯಲ್ಲಿ ಡೇರಾ ಸಚ್ಚಾ ಆಶ್ರಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ನಾಕಾಬಂದಿ ಹಾಕಲಾಗಿದ್ದು, ಆಶ್ರಮ  ಪ್ರವೇಶಿಸುವ ಭಕ್ತರನ್ನು ತೀವ್ರ ಶೋಧಕ್ಕೆ ಒಳಪಡಿಸಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!