ಡೇರಾ ಆಶ್ರಮದಲ್ಲಿ ಸ್ಫೋಟಕ ಕಾರ್ಖಾನೆ ಪತ್ತೆ, ಮುಂದುವರೆದ ಶೋಧ ಕಾರ್ಯಾಚರಣೆ 
ದೇಶ

ಡೇರಾ ಆಶ್ರಮದಲ್ಲಿ ಸ್ಫೋಟಕ ಕಾರ್ಖಾನೆ ಪತ್ತೆ, ಮುಂದುವರೆದ ಶೋಧ ಕಾರ್ಯಾಚರಣೆ

ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ನ ಡೇರಾ ಸಚ್ಛಾ ಸೌಧ ಆಶ್ರಮದಲ್ಲಿ ಮೇಲೆ ನಡೆಸಲಾಗುತ್ತಿರುವ ದಾಳಿ ಎರಡೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ನಡೆಸಲಾಗಿರುವ ದಾಳಿಯಲ್ಲಿ ಆಶ್ರಮದೊಳಗೆ...

ಸಿರ್ಸಾ: ಸ್ವಯಂ ಘೋಷಿತ ದೇವಮಾನವ ಗುರ್ಮಿತ್ ರಾಮ್ ರಹೀಮ್ ಸಿಂಗ್ ನ ಡೇರಾ ಸಚ್ಛಾ ಸೌಧ ಆಶ್ರಮದಲ್ಲಿ ಮೇಲೆ ನಡೆಸಲಾಗುತ್ತಿರುವ ದಾಳಿ ಎರಡೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ನಡೆಸಲಾಗಿರುವ ದಾಳಿಯಲ್ಲಿ ಆಶ್ರಮದೊಳಗೆ ಅಕ್ರಮ ಸ್ಫೋಟಕ ಕಾರ್ಖಾನೆಯ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. 

ನಿನ್ನೆ ಆಶ್ರಮದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದ ಅಧಿಕಾರಿಗಳು, ಕಾರು, ನಿಷೇಧಿತ ನೋಟುಗಳು, ಪ್ಲಾಸ್ಟಿಕ್ ಕರೆನ್ಸಿ, ಕಂಪ್ಯೂಟರ್ ಗಳು, ಹಾರ್ಡ್ ಡಿಸ್ಕ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಅಲ್ಲದೆ, ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿತ್ತು. 

ಇದರಂತೆ ಇಂದೂ ಕೂಡ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಡೇರಾ ಪ್ರಾಂಗಣದಲ್ಲಿ ಅಕ್ರಮವಾಗಿ ಸ್ಫೋಟ ಸಾಮಾಗ್ರಿಗಳನ್ನು ತಯಾರು ಮಾಡುವ ಕಾರ್ಖಾನೆ ಕಂಡು ಬಂದಿದೆ. 

ಈ ವೇಳೆ ಸ್ಥಳದಲ್ಲಿದ್ದ ಸ್ಫೋಟಕ ಸಾಮಾಗ್ರಿಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು ಕಾರ್ಖಾನೆಯನ್ನು ಜಪ್ತಿ ಮಾಡಿದ್ದಾರೆ. ಡೇರಾ ಸಂಕೀರ್ಣದಿಂದ ಪೊಲೀಸರು ಸ್ಫೋಟಕ ತುಂಬಿರುವ ಸುಮಾರು 100ಕ್ಕೂಹೆಚ್ಚು ಪೆಟ್ಟಿಗೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿರುವ ವಿಧಿವಿಜ್ಞಾನ ತಂಡದವರು ಸ್ಫೋಟಕ ವಸ್ತುಗಳ ನಮೂನೆಗಳನ್ನು ಪರೀಕ್ಷೆ ನಡೆಸುತ್ತಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ದೋಷಿಯೆಂದು ಸಾಬೀತಾದ ಬಳಿಕ ಸ್ವಯಂ ಘೋಷಿತ ದೇವಮಾನವ ಗುರ್ಮಿತ ರಾಮ್ ರಹೀಮ್ ಸಿಂಗ್ ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಪಂಚಕುಲ ಸಿಬಿಐ ನ್ಯಾಯಾಲಯ ಸಿರ್ಸಾದ ಡೇರಾ ಆಶ್ರಮದಲ್ಲಿ ಶೋಧ ಕಾರ್ಯಾಚರಣೆ ನಡೆಸುವಂತೆ ಆದೇಶಿಸಿತ್ತು. ಈ ಹಿನ್ನಲೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯಾಚರಣೆಗಳನ್ನು ನಡೆಸುತ್ತಿದ್ದಾರೆ. 

ತನಿಖೆ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಆಶ್ರಮದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ, ಅಲ್ಲದೆ, ಇಂಟರ್ನೆಟ್ ಸೇವೆಗಳನ್ನೂ ಸ್ಥಗಿತಗೊಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೃಷಿ ಭೂಮಿ ಸೇರಿದಂತೆ ಎಲ್ಲಾ ಸ್ವತ್ತಿಗೂ ಸ್ವಯಂ ಚಾಲಿತ ಮ್ಯುಟೇಷನ್‌: ಕಂದಾಯ ಸಚಿವ ಕೃಷ್ಣಬೈರೇಗೌಡ

ಅಗ್ನಿಶಾಮಕ ಇಲಾಖೆಯಲ್ಲಿ ಖಾಲಿ ಇರುವ 1,600 ಹುದ್ದೆ ಶೀಘ್ರವೇ ಭರ್ತಿ: ಜಿ. ಪರಮೇಶ್ವರ

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

SCROLL FOR NEXT