ಕುಸಿದ ಮೇಲ್ಸೇತುವೆ 
ದೇಶ

ಭುವನೇಶ್ವರ: ನಿರ್ಮಾಣ ಹಂತದ ಮೇಲ್ಸೇತುವೆ ಕುಸಿತ, ಕನಿಷ್ಟ 2 ಸಾವು, 10 ಮಂದಿಗೆ ಗಾಯ

ಒಡಿಶಾದ ಭುವನೇಶ್ವರದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಕನಿಷ್ಟ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಭುವನೇಶ್ವರ: ಒಡಿಶಾದ ಭುವನೇಶ್ವರದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದ ಪರಿಣಾಮ ಕನಿಷ್ಟ ಇಬ್ಬರು ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಭುವನೇಶ್ವರದ ಬೊಮಿಖಲ್ ಪ್ರದೇಶದಲ್ಲಿ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದಿದ್ದು, ಘಟನೆಯಲ್ಲಿ ಕನಿಷ್ಛ ಇಬ್ಬರು ಸಾವನ್ನಪ್ಪಿದ್ದಾರೆ. ಇಂದು ಮಧ್ಯಾಹ್ನ 12.25ರ ವೇಳೆಯಲ್ಲಿ ಈ ಅವಘಡ ಸಂಭವಿಸಿದ್ದು, ಮೇಲ್ಸೇತುವೆಯ ಒಂದು  ಭಾಗ ಕುಸಿದ ಪರಿಣಾಮ ಅದರ ಕೆಳಗಿದ್ದ ಸುಮಾರು 20ಕ್ಕೂ ಅಧಿಕ ಮಂದಿ ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀರು ದೌಡಾಯಿಸಿದ್ದು, ಅವಶೇಷ ತೆರವು ಕಾರ್ಯಾಚರಣೆ ಭರದಿಂದ ಸಾಗಿದೆ. ಅಂತೆಯೇ ಗಾಯಾಳುಗಳನ್ನು ಸಮೀಪದ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನು  ಇಬ್ಬರು ಮೃತರ ಪೈಕಿ ಓರ್ವ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಸತ್ಯಾ ಪಟ್ನಾಯಕ್ ಎಂಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಅಂತೆಯೇ ಆತನ ಪುತ್ರಿ ಶೀಥಲ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಘೋಷಣೆ
ಇದೇ ವೇಳೆ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT