ಸಾಂದರ್ಭಿಕ ಚಿತ್ರ 
ದೇಶ

ಬ್ಲೂವೇಲ್ ಭೂತ: ಲಖನೌ ಶಾಲೆಗಳಲ್ಲಿ ಸ್ಮಾರ್ಟ್'ಫೋನ್ ಬಳಕೆಗೆ ನಿಷೇಧ ಹೇರಿದ ಸರ್ಕಾರ

ಅಪಾಯಕಾರಿ ಆಟ ಬ್ಲೂವೇಲ್ ಭೂತ ದೇಶದಾದ್ಯಂತ ಭೀತಿಯನ್ನು ಸೃಷ್ಟಿಸಿದ್ದು, ಮಾರಣಾಂತಿಕ ಆಟಕ್ಕೆ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಲಖನೌ ಶಿಕ್ಷಣ ಇಲಾಖೆ...

ಲಖನೌ: ಅಪಾಯಕಾರಿ ಆಟ ಬ್ಲೂವೇಲ್ ಭೂತ ದೇಶದಾದ್ಯಂತ ಭೀತಿಯನ್ನು ಸೃಷ್ಟಿಸಿದ್ದು, ಮಾರಣಾಂತಿಕ ಆಟಕ್ಕೆ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಬಲಿಯಾಗುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕಠಿಣ ಕ್ರಮ ಕೈಗೊಂಡಿರುವ ಲಖನೌ ಶಿಕ್ಷಣ ಇಲಾಖೆ ಶಾಲೆಗಳಲ್ಲಿ ಸ್ಮಾರ್ಟ್ ಫೋನ್ ಬಳಕೆಗಳ ಮೇಲೆ ನಿಷೇಧ ಹೇರಿದೆ. 
ಬ್ಲೂವೇಲ್ ಚಾಲೆಂಜ್ ಗೇಮ್ ನಿಂದ ಮಕ್ಕಳನ್ನು ದೂರವಿಡುವ ಸಲುವಾಗಿ ಅಧಿಕಾರಿಗಳು ಈ ಕ್ರಮವನ್ನು ಕೈಗೊಂಡಿದ್ದು, ಮಕ್ಕಳು ಮೊಬೈಲ್ ಗಳಲ್ಲಿ ಆಟಗಳನ್ನು ಆಟದಂತೆ ಪೋಷಕರು ಹಾಗೂ ಶಿಕ್ಷಕರು ನೋಡಿಕೊಳ್ಳಬೇಕೆಂದು ಇಲಾಖೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಬ್ಲೂವೇಲ್ ಆಟದ ಚಟಕ್ಕೆ ಬಿದ್ದಿದ್ದ 14 ವರ್ಷದ ಬಾಲಕ ಆದಿತ್ಯಾನ್ ವರ್ಧನ್ ಎಂಬ ಬಾಲಕ ಕೆಲ ದಿನಗಳ ಹಿಂದಷ್ಟೇ ಕೊಠಡಿಯಲ್ಲಿ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ. 
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಶಿಕ್ಷಣ ಇಲಾಖೆ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸ್ಮಾರ್ಟ್ ಫೋನ್ ಗಳನ್ನು ಬಳಕೆ ಮಾಡದಂತೆ ನಿಷೇಧ ಹೇರಿದೆ. ಪ್ರತಿ ನಿತ್ಯ ಮಕ್ಕಳನ್ನು ಪರಿಶೀಲನೆ ನಡೆಸುವಂತೆ ಸೂಚನೆ ನೀಡಲಾಗಿದ್ದು, ಮಕ್ಕಳ ಚಟವಟಿಕೆಗಳ ಮೇಲೆ ಗಮನ ಹರಿಸುವಂತೆ ಶಿಕ್ಷಕರು ಹಾಗೂ ಪೋಷಕರಿಗೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿ ಮುಕೇಶ್ ಮುಕಾರ್ ಸಿಂಗ್ ಅವರು ಹೇಳಿದ್ದಾರೆ. 
ಶಾಲೆಗೆ ಬರುವ ಮಕ್ಕಳು ಮೊಬೈಲ್ ಗಳನ್ನು ಇಟ್ಟುಕೊಂಡಿದ್ದಾರೆಯೇ ಎಂಬುದರ ಕುರಿತಂತೆ ಪರಿಶೀಲನೆ ನಡೆಸುವಂತೆ ಈಗಾಗಲೇ ಎಲ್ಲಾ ಶಾಲೆಗಳ ಆಡಳಿತ ಮಂಡಳಿಗಳಿಗೂ ಸೂಚಿಸಲಾಗಿದೆ. ಮಗುವಿನ ವರ್ತನೆಯಲ್ಲಿ ಬದಲಾವಣೆಗಳು ಕಂಡುಬಂದಿದ್ದೇ ಆದರೆ, ಅಧಿಕಾರಿಗಳಿಗೆ ಮಾಹಿತಿ ತಿಳಿಸಿ ಬಳಿಕ ಮಕ್ಕಳಿಗೆ ಕೌನ್ಸಿಲಿಂಗ್ ಕೊಡಿಸುವಂತೆಯೂ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

‘ನೇಪಾಳಿಗರೇ, ನೀವು ಒಂಟಿಯಲ್ಲ, ನಾನು ನಿಮ್ಮೊಂದಿಗೆ ನಿಲ್ಲುತ್ತೇನೆ’: ಪ್ರವಾಹ ಪೀಡಿತ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ಬಾಲಿವುಡ್ ನಟ ಸೋನು ಸೂದ್!

'ಸಿಂಹ ಸುಮ್ಮನೆ ಕುಳಿತಿದೆ ಅಂದ್ರೆ ಸುಸ್ತಾಗಿದೆ ಅಂತಲ್ಲ, ಮುಂದಿನ ಬೇಟೆಗೆ ರೆಡಿ ಆಗ್ತಿದೆ ಎಂದರ್ಥ': ಕಿಚ್ಚ ಸುದೀಪ್ ದಿಢೀರ್ ಪೋಸ್ಟ್; ಇಲ್ಲಿದೆ ಕಾರಣ...

ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕದ ಪೈಲಟ್‌ ಅಭಿಷೇಕ್​ ಸೇರಿ ಇಬ್ಬರು ಸಾವು; Video