ಪ್ರತಿಭಟನಾ ನಿರತ ಸ್ಥಳೀಯರು 
ದೇಶ

ಗುರುಗಾಂವ್ ಶಾಲಾ ಬಾಲಕನ ಹತ್ಯೆ: ಶಾಲೆಯ ಪಕ್ಕದಲ್ಲಿದ್ದ ಮದ್ಯದಂಗಡಿಗೆ ಬೆಂಕಿಯಿಟ್ಟ ಉದ್ರಿಕ್ತರು

ಗುರುಗಾಂವ್ ನ ರಿಯಾನ್ ಇಂಟರ್'ನ್ಯಾಷನಲ್ ಶಾಲಾ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆಯ ಕಾವು ಜೋರಾಗಿದ್ದು ಪ್ರತಿಭಟನಾಕಾರರು ಶಾಲೆಯ ಪಕ್ಕದಲ್ಲಿದ್ದ ಮದ್ಯದಂಗಡಿಗೆ ಬೆಂಕಿ ಹಚ್ಚಿದ್ದಾರೆ...

ನವದೆಹಲಿ: ಗುರುಗಾಂವ್ ನ ರಿಯಾನ್ ಇಂಟರ್'ನ್ಯಾಷನಲ್ ಶಾಲಾ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆಯ ಕಾವು ಜೋರಾಗಿದ್ದು ಪ್ರತಿಭಟನಾಕಾರರು ಶಾಲೆಯ ಪಕ್ಕದಲ್ಲಿದ್ದ ಮದ್ಯದಂಗಡಿಗೆ ಬೆಂಕಿ ಹಚ್ಚಿದ್ದಾರೆ. 
ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದೆ. ಇನ್ನು ಶಾಲೆಯ ಮುಂಭಾಗದಲ್ಲಿ ಸೇರಿರುವ ನೂರಾರು ಮಂದಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಪಕ್ಕದಲ್ಲೇ ಇದ್ದ ಬಾರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಸದ್ಯ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಜಾರ್ಜ್ ನಡೆಸುತ್ತಿದ್ದಾರೆ. 
ಪೊಲೀಸರು ನಡೆಸುತ್ತಿರುವ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಬಸ್ ಚಾಲಕನನ್ನು ತಪ್ಪಿತಸ್ಥ ಎಂದು ತೋರಿಸಲಾಗುತ್ತಿದ್ದು ಆದರೆ ಇದರ ಜವಾಬ್ದಾರಿಯನ್ನು ಶಾಲೆಯ ಆಡಳಿತ ಮಂಡಳಿ ಹೊರಬೇಕು ಎಂದು ಜತೆಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ.  
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವಾಗಿ ನ್ಯಾಯ ದೊರಕಿಸುವುದಾಗಿ ಹರಿಯಾಣದ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ಭರವಸೆ ನೀಡಿದ್ದಾರೆ. 
ಕಳೆದ ಶುಕ್ರವಾರ ರಿಯಾನ್ ಇಂಟರ್ ನ್ಯಾಷನಲ್ ಶಾಲೆ ಶೌಚಾಲಯದಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕುತ್ತಿಗೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಶಾಲಾ ವಾಹನದ ನಿರ್ವಾಹಕನೇ ಈ ಕುಕೃತ್ಯವನ್ನು ಎಸಗಿದ್ದಾನೆಂದು ಹೇಳಲಾಗುತ್ತಿದ್ದು ಪೊಲೀಸರು ಆತನನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT