ಡೇರಾ ಸಚ್ಚಾ ಸೌಧ ಆಶ್ರಮ 
ದೇಶ

ಡೇರಾ ಆಶ್ರಮದಲ್ಲಿ ನಡೆದ ಮೂರು ದಿನಗಳ ಮ್ಯಾರಥಾನ್ ಶೋಧ ಕಾರ್ಯಾಚರಣೆ ಅಂತ್ಯ!

ಸ್ವಯಂಘೋಷಿತ ದೇವಮಾನವ ಅತ್ಯಾಚಾರಿ ಬಾಬಾ ರಾಮ್ ರಹೀಂ ಸಿಂಗ್ ನ ಸಿರ್ಸಾದ ಡೇರಾ ಸಚ್ಚಾಸೌಧ ಆಶ್ರಮದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಭಾನುವಾರ ಅಂತ್ಯಗೊಂಡಿದೆ.

ಚಂಡೀಘಡ: ಸ್ವಯಂಘೋಷಿತ ದೇವಮಾನವ ಅತ್ಯಾಚಾರಿ ಬಾಬಾ ರಾಮ್ ರಹೀಂ ಸಿಂಗ್ ನ ಸಿರ್ಸಾದ ಡೇರಾ ಸಚ್ಚಾಸೌಧ ಆಶ್ರಮದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಶೋಧ ಕಾರ್ಯಾಚರಣೆ ಭಾನುವಾರ  ಅಂತ್ಯಗೊಂಡಿದೆ.

ಪಂಜಾಬ್ ಹರ್ಯಾಣ ಹೈಕೋರ್ಟ್ ನಿರ್ದೇಶನದ ಮೇರೆಗೆ ಯೋಧರ ಸಾಥ್ ಪಡೆದ ಹರ್ಯಾಣ ಪೊಲೀಸರು ಕಳೆದ ಶುಕ್ರವಾರದಿಂದಲೂ ಸಿರ್ಸಾ ಆಶ್ರಮದಲ್ಲಿ ವ್ಯಾಪಕ ಶೋಧ ಕಾರ್ಯಾತಚರಣೆ ನಡೆಸುತ್ತಿದ್ದರು. ಭಾನುವಾರ  ಸಂಜೆ ವೇಳೆಗೆ ಆಶ್ರಮದ ಶೋಧ ಕಾರ್ಯಾಚರಣೆ ಮುಕ್ತಾಯವಾಗಿದೆ ಎಂದು ಹರ್ಯಾಣ ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ್ ಮೆಹ್ರಾ ತಿಳಿಸಿದ್ದಾರೆ.
ಈ ಬಗ್ಗೆ ಆಶ್ರಮದ ಆವರಣದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಮೆಹ್ರಾ ಅವರು, ಹೈಕೋರ್ಟ್ ಆದೇಶದಂತೆ ಆಶ್ರಮದಲ್ಲಿನ ಶೋಧಕಾರ್ಯಾಚರಣೆ ಪೂರ್ಣವಾಗಿದೆ. ನಾಳೆ ಶೋಧ ಕಾರ್ಯಾಚರಣೆಯ ಸಂಪೂರ್ಣ  ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಲಾಗುತ್ತದೆ. ಅಂತೆಯೇ ಆಶ್ರಮಕ್ಕೆ ಒದಗಿಸಲಾಗಿರುವ ಭದ್ರತೆಯನ್ನು ಮುಂಜಾಗ್ರತಾ ಕ್ರಮವಾಗಿ ಮತ್ತೊಂದಿಷ್ಟು ದಿನ ಮುಂದುವರೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಇದೇ ವೇಳೆ ಸಿರ್ಸಾದಲ್ಲಿ ಮುಂಜಾಗ್ರತಾ ಕ್ರಮವಾಗಿ ಸ್ಥಗಿತಗೊಳಿಸಲಾಗಿದ್ದ ಎಸ್ ಎಂಎಸ್, ಇಂಟರ್ ನೆಟ್, ರೈಲ್ವೇ ಸೇವೆಗಳನ್ನು ನಾಳೆಯಿಂದಲೇ ಪುನಾರಂಭ ಮಾಡುವುದಾಗಿಯೂ ಸತೀಶ್ ಮೆಹ್ರಾ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT