ನರೇಂದ್ರ ಮೋದಿ 
ದೇಶ

ಅಮೆರಿಕನ್ನರು 1893ರ ಮೊದಲ 9/11 ಮರೆತದ್ದು, ಎರಡನೇ 9/11 ಕ್ಕೆ ಕಾರಣವಾಯಿತು: ಪ್ರಧಾನಿ ಮೋದಿ

ದೀನದಯಾಳ್ ಉಪಾಧ್ಯಾಯರ ಜನ್ಮ ಶತಮಾನೋತ್ಸವ ಹಾಗೂ ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ್ದರ 125 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ...

ನವದೆಹಲಿ: ದೀನದಯಾಳ್ ಉಪಾಧ್ಯಾಯರ ಜನ್ಮ ಶತಮಾನೋತ್ಸವ ಹಾಗೂ ಸ್ವಾಮಿ ವಿವೇಕಾನಂದರು ಶಿಕಾಗೋದಲ್ಲಿ ವಿಶ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ್ದರ 125 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೆ.11 ರಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ್ದಾರೆ. 
ಇಂದು 9/11 ಎಂದೇ ಪ್ರಸಿದ್ಧವಾದ ದಿನಾಂಕವಾಗಿದೆ. ಈ ದಿನಾಂಕವನ್ನು 2001 ರ ಘಟನೆಯ ಬಳಿಕ ವ್ಯಾಪಕವಾಗಿ ನೆನಪಿಸಿಕೊಳ್ಳಲಾಗುತ್ತದೆ. ಆದರೆ 1893ರ 9/11 ನ್ನೂ ನಾವು ನೆನಪಿಟ್ಟುಕೊಂಡಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಮೆರಿಕನ್ನರು 1893 ರಲ್ಲಿ ನಡೆದಿದ್ದ ಮೊದಲ 9/11 ರನ್ನು ಮರೆತಿದ್ದರು ಪರಿಣಾಮವಾಗಿ ಎರಡನೇ 9/11 ನಡೆಯಿತು ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. 
ಸ್ವಾಮಿ ವಿವೇಕಾನಂದರು ನಮ್ಮ ಸಮಾಜದಲ್ಲಿ ನುಸುಳಿರುವ ದುಷ್ಟಶಕ್ತಿಗಳ ಬಗ್ಗೆ ಧ್ವನಿ ಎತ್ತಿದ್ದರು. ಸ್ವಾಮಿ ವಿವೇಕಾನಂದರು ಭಾಷಣ ಮಾಡುವುದಕ್ಕೂ ಮುನ್ನ ಅಲ್ಲಿನ ಜನತೆಗೆ ಮಹಿಳೆಯರೇ ಮತ್ತು ಮಹನೀಯರೇ( ಲೇಡೀಸ್ ಆಂಡ್ ಜೆಂಟಲ್ ಮೆನ್) ಎಂಬ ಶಬ್ದವನ್ನು ಹೊರತುಪಡಿಸಿ ಭಾಷಣ ಪ್ರಾರಂಭಿಸುವುದಕ್ಕೆ ಬೇರೆ ಶಬ್ದ ತಿಳಿದಿರಲಿಲ್ಲ. ಆದರೆ ಮೊದಲ ಬಾರಿಗೆ ವಿವೇಕಾನಂದರು ಸಹೋದರ ಸಹೋದರಿಯರೇ... ಎಂದು ಸಭೆಯನ್ನುದ್ದೇಶಿಸಿ ಮಾತನಾಡಿದ್ದರು ಎಂದಿದ್ದಾರೆ. 
ಸ್ವಾಮಿ ವಿವೇಕಾನಂದರು ನಮ್ಮ ಗುರುತನ್ನು ಮತ್ತಷ್ಟು ದೃಢಪಡಿಸಿದ್ದರು. 83 ರ 9/11 ಸಹೋದರತ್ವದ ಸಂಕೇತವಾಗಿ ವಿವೇಕಾನಂದರು ಕೇವಲ ಮೂರು ಪದಗಳಲ್ಲಿ ಭಾರತದ ಶಕ್ತಿಯನ್ನು ಜಗತ್ತಿಗೆ ತಿಳಿಸಿದ್ದರು ಎಂದು ಮೋದಿ ವಿವೇಕಾನಂದರನ್ನು ಸ್ಮರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT