ಸಂಗ್ರಹ ಚಿತ್ರ 
ದೇಶ

ಶಂಕಾಸ್ಪದ ಡ್ರೋಣ್ ಗಳ ಹೊಡೆದುರುಳಿಸಲು ಎನ್ಎಸ್ ಜಿ, ಸಿಐಎಸ್ ಎಫ್ ಗೆ ಅಧಿಕಾರ!

ಆಗಸದಲ್ಲಿ ಶಂಕಾಸ್ಪದವಾಗಿ ಹಾರಾಡುವ ಡ್ರೋಣ್ ಗಳನ್ನು ಯಾವುದೇ ಮುಲಾಜಿಲ್ಲದೇ ಹೊಡೆದುರುಳಿಸಲು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಪಡೆಗಳಿಗೆ ವಿಶೇಷ ಅಧಿಕಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ನವದೆಹಲಿ: ಆಗಸದಲ್ಲಿ ಶಂಕಾಸ್ಪದವಾಗಿ ಹಾರಾಡುವ ಡ್ರೋಣ್ ಗಳನ್ನು ಯಾವುದೇ ಮುಲಾಜಿಲ್ಲದೇ ಹೊಡೆದುರುಳಿಸಲು ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ ಜಿ) ಹಾಗೂ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)  ಪಡೆಗಳಿಗೆ ವಿಶೇಷ ಅಧಿಕಾರ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಇದಕ್ಕಾಗೆ ಕೇಂದ್ರದ ರಕ್ಷಣಾ ಇಲಾಖೆ ಗೃಹ ಇಲಾಖೆಯೊಂದಿಗೆ ಸೇರಿ ಹೊಸ ನೀತಿ ರಚನೆಗೆ ಮುಂದಾಗಿದ್ದು, ತಿಂಗಳಾಂತ್ಯದ ಹೊತ್ತಿಗೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕೆಳ ಮಟ್ಟದಲ್ಲಿ ಹಾರಾಡುವ ವಸ್ತುಗಳು, ಡ್ರೋನ್‌ಗಳು, ಗ್ಲೆ„ಡರ್‌ಗಳು ಮುಂತಾದುವುಗಳಿಂದ ಭಯೋತ್ಪಾದಕ ದಾಳಿ ನಡೆಯುವ ಅಪಾಯದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳು ಅಧಿಕಾರ ಹೊಂದಲಿವೆ.
ಎನ್ಎಸ್ ಜಿ ಮತ್ತು ಸಿಐಎಸ್ ಎಫ್ ಎರಡೂ ಪಡೆಗಳ ಬಳಿ ಈಗಾಗಲೇ ಆಂತರಿಕ ರಾಡಾರ್‌, ರೇಡಿಯೋ ಫ್ರೀಕ್ವೆನ್ಸಿ ಜಾಮರ್‌ ಮತ್ತು ಡಿಟೆಕ್ಟರ್‌ ಹೊಂದಿದ ಎಲೆಕ್ಟ್ರೋ ಮ್ಯಾಗ್ನೆಟಿಕ್‌ ಸಿಸ್ಟಂ ಇದ್ದು, ಇವುಗಳ ಮೂಲಕ ಹಾರುವ ವಸ್ತುಗಳನ್ನು ಹೊಡೆದುರುಳಿಸಲಾಗುತ್ತದೆ ಎಂದು ರಕ್ಷಣಾ ತಜ್ಞರು ಹೇಳಿದ್ದಾರೆ.
ಇನ್ನು ಈ ಬಗ್ಗೆ ನಡೆದ ಮಹತ್ವದ ಸಭೆಯಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಸೇರಿದಂತೆ ಗೃಹ ಇಲಾಖೆಯ ಹಲವು ಉನ್ನತ ಅಧಿಕಾರಿಗಳು ಪಾಲ್ಗೊಂಡಿದ್ದರು. ಸಭೆ ಬಳಿಕ ಮಾಹಿತಿ ನೀಡಿರುವ ಕೇಂದ್ರ ಗೃಹ ಇಲಾಖೆ, ಭದ್ರತಾ ಪಡೆಗಳಿಗೆ ಡ್ರೋಣ್ ಅಥವಾ ಶಂಕಾಸ್ಪದವಾಗಿ ಹಾರುವ ವಸ್ತುಗಳನ್ನು ಹೊಡೆದುರುಳಿಸಲು ಕಾನೂನಾತ್ಮಕ ಅವಕಾಶವನ್ನು ನೀಡಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಎನ್​ಎಸ್​ಜಿ ಮತ್ತು ಸಿಐಎಸ್​ಎಫ್ ಇನ್​ಬಿಲ್ಟ್ ರೇಡಾರ್, ರೇಡಿಯೋ ಫ್ರೀಕ್ವೆನ್ಸಿ ಜಾಮರ್ ಮತ್ತು ಡಿಟೆಕ್ಟರ್​ಗಳನ್ನು ಒಳಗೊಂಡ ಎಲೆಕ್ಟ್ರೋಮ್ಯಾಗ್ನೇಟಿಕ್ ಸಿಸ್ಟಂ ಹೊಂದಲಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಗಾಂಧಿ ಜಯಂತಿ 2025: ರಾಜ್‌ಘಾಟ್‌ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನ

ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗದು: ಸಿಎಂ ಸಿದ್ದರಾಮಯ್ಯ

RSS ಶತಮಾನೋತ್ಸವ: ಈ ಅದ್ಭುತ ಪಯಣ ಭಾರತದ ದಿಕ್ಕನ್ನೇ ಬದಲಾಯಿಸಿದೆ; BJP

ದ್ವೇಷ, ಹಿಂಸೆ, ಅನ್ಯಾಯವೆಂಬ ಅಂಧಕಾರ ಆವರಿಸಿದಂತೆಲ್ಲಾ ಅದರಿಂದ ಹೊರಬರಲು ಮತ್ತೆ ಮತ್ತೆ ನೆನಪಾಗುವುದು ಬಾಪು: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿ: ನವರಾತ್ರಿ ವೇಳೆ ಮಹಿಳೆಯೊಬ್ಬರ ಸಂಭ್ರಮಕ್ಕೆ ಯೋಜನೆ ಕಾರಣವಾಗಿರುವುದು ಸಾರ್ಥಕ ತರಿಸಿದೆ ಎಂದ ಸಿಎಂ

SCROLL FOR NEXT