ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರ: ಮತ್ತೊಬ್ಬ ಎಲ್ಇಟಿ ಉಗ್ರ ಪೊಲೀಸರಿಗೆ ಶರಣು

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನೊಬ್ಬ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರನೊಬ್ಬ ಶರಣಾಗಿದ್ದಾನೆಂದು ಮಂಗಳವಾರ ತಿಳಿದುಬಂದಿದೆ. 
ನಿನ್ನೆ ಉತ್ತರ ಕಾಶ್ಮೀರದಲ್ಲಿ ನಡೆಸಲಾಗಿದ್ದ ಕಾರ್ಯಾಚರಣೆ ವೇಳೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿತ್ತು. ಕಾರ್ಯಾಚರಣೆ ವೇಳೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರನೊಬ್ಬ ಭದ್ರತಾಪಡೆಗಳ ಮುಂದೆ ಶರಣಾಗಿದ್ದ. 
ಸ್ಥಳದಲ್ಲಿದ್ದ ಮನೆಯೊಂದರಲ್ಲಿ ಮತ್ತೊಬ್ಬ ಉಗ್ರ ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾಪಡೆ ಕಾರ್ಯಾಚರಣೆಯನ್ನು ಮುಂದುವರಿಸಿತ್ತು. ಈ ವೇಳೆ ಶರಣಾಗತಿಯಾದರೆ, ಯಾರೊಬ್ಬರು ಗುಂಡು ಹಾರಿಸುವುದಿಲ್ಲ ಎಂದು ಉಗ್ರನಿಗೆ ತಿಳಿಸಿತು. ಇದರಂತೆ ಉಗ್ರ ಶರಣಾಗಲು ಒಪ್ಪಿಕೊಂಡಿದ್ದ ಎಂದು ವರದಿಗಳಿ ತಿಳಿಸಿವೆ. 
ಶರಣಾಗತಿಯಾಗಿರುವ ಉಗ್ರನ್ನು ಆರೀಫ್ ಅಹ್ಮದ್ ಸೊಫಿ ಎಂಬು ಗುರ್ತಿಸಲಾಗಿದೆ. ಉಗ್ರ ಶರಣಾಗುತ್ತಿದ್ದಂತೆಯೇ ಆತನನ್ನು ಸ್ಥಳೀಯ ಪೊಲೀಸ್ ಕ್ಯಾಂಪ್ ಗೆ ಕರೆದೊಯ್ಯದಲಾಗಿದೆ. ಭದ್ರತಾ ಪಡೆಗಳು ಇದೀಗ ಆತನನ್ನು ವಿಚಾರಣೆಗೊಳಪಡಿಸಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT