ನೌಕರರು 
ದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ; ತುಟ್ಟಿಭತ್ಯೆ ಶೇಕಡ 1ರಷ್ಟು ಹೆಚ್ಚಳ

ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ 1ರಷ್ಟು ಹೆಚ್ಚಿಸಲು ಸಂಪುಟ ಸಭೆ ನಿರ್ಧರಿಸಿದೆ...

ನವದೆಹಲಿ: ಕೇಂದ್ರ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು(ಡಿಎ) ಶೇ 1ರಷ್ಟು ಹೆಚ್ಚಿಸಲು ಸಂಪುಟ ಸಭೆ ನಿರ್ಧರಿಸಿದೆ. ಇದರಿಂದಾಗಿ 50 ಲಕ್ಷ ನೌಕರರು ಮತ್ತು 61 ಲಕ್ಷ ಪಿಂಚಣಿದಾರರಿಗೆ ಅನುಕೂಲ ಆಗಲಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೌಕರರ ಡಿಎ ಅನ್ನು ಶೇ 1ರಷ್ಟು ಹೆಚ್ಚಳಕ್ಕೆ ಸಂಪುಟ ಸಭೆ ನಿರ್ಧರಿಸಿದ್ದು ಈ ಹಿಂದೆ ಶೇಕಡ 4ರಷ್ಟಿದ್ದ ಡಿಎ ಇದೀಗ ಶೇಕಡ 5ಕ್ಕೆ ಹೆಚ್ಚಳವಾಗಿದೆ.
ಜುಲೈ 1ರಿಂದ ಪೂರ್ವಾನ್ವಯವಾಗಿ ಇದು ಜಾರಿಯಾಗಲಿದೆ. ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆಯ ಹೆಚ್ಚುವರಿ ಕಂತು ಮತ್ತು ನಿವೃತ್ತ ನೌಕರರಿಗೂ ತುಟ್ಟಿಭತ್ಯೆ ಪರಿಹಾರ ಹಣ(ಡಿಆರ್‌) ನೀಡಲು ಸಭೆ ಒಪ್ಪಿಗೆ ನೀಡಿದೆ.
ತುಟ್ಟಿಭತ್ಯೆ ಹೆಚ್ಚಳದಿಂದ ಬೊಕ್ಕಸಕ್ಕೆ ವಾರ್ಷಿಕ ಮೂರು ಸಾವಿರ ಕೋಟಿ ರುಪಾಯಿ ಹೊರೆಯಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

ಅಯೋಧ್ಯೆ ಧರ್ಮಧ್ವಜದಲ್ಲಿರುವ ಕೋವಿದಾರ ಮರ: ರಾಜವೃಕ್ಷಕ್ಕೂ, ಶ್ರೀರಾಮಚಂದ್ರನಿಗೂ ಅದೆಂಥ ನಂಟು? ತ್ರೇತಾಯುಗದಲ್ಲಿದ್ದ ದೈವಿಕ ಮರದ ವಿಶೇಷತೆ ಏನು?

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

SCROLL FOR NEXT