ಶಶಿ ಕರ್ನಾವತ್ 
ದೇಶ

ಮಧ್ಯಪ್ರದೇಶ ಸರ್ಕಾರದಿಂದ ಐಎಎಸ್ ಅಧಿಕಾರಿ ಶಶಿ ಕರ್ನಾವತ್ ವಜಾ

ನಾಲ್ಕು ವರ್ಷಗಳ ನಂತರ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಶಶಿ ಕರ್ನಾವತ್....

ಭೋಪಾಲ್: ನಾಲ್ಕು ವರ್ಷಗಳ ನಂತರ ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಅಮಾನತುಗೊಂಡ ಐಎಎಸ್ ಅಧಿಕಾರಿ ಶಶಿ ಕರ್ನಾವತ್ ಅವರನ್ನು ಮಧ್ಯಪ್ರದೇಶ ಸರ್ಕಾರ ಸೋಮವಾರ ಸೇವೆಯಿಂದ ವಜಾಗೊಳಿಸಿದೆ.
1969ರ ಅಖಿಲ ಭಾರತ ಸೇವಾ ನಿಯಮದಡಿ ಶಶಿ ಕರ್ನಾವತ್ ಅವರನ್ನು ಸೇವೆಯಿಂದ ವಜಾಗೊಳಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ದೋಷಿಯಾಗಿದ್ದ ದಲಿತ ಐಎಎಸ್‌ ಅಧಿಕಾರಿ ಶಶಿ ಕರ್ನಾವತ್‌ಗೆ ಮಧ್ಯ ಪ್ರದೇಶದ ಮಾಂಡ್ಲಾ ನ್ಯಾಯಾಲಯ ಐದು ವರ್ಷ ಜೈಲು ಶಿಕ್ಷೆ ಹಾಗೂ 5 ಲಕ್ಷ ರುಪಾಯಿ ದಂಡ ವಿಧಿಸಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು 2013ರಲ್ಲಿ ಸೇವೆಯಿಂದ ಅಮಾನತು ಮಾಡಲಾಗಿತ್ತು. ಬಳಿಕ ಹೈಕೋರ್ಟ್‌ಗೆ ಮೊರೆ ಹೋಗಿ ಜಾಮೀನು ಪಡೆದಿದ್ದರು.
ರಾಜ್ಯ ನಾಗರಿ ಸೇವೆ ಅಧಿಕಾರಿಯಾಗಿದ್ದ ಶಶಿ ಕರ್ನಾವತ್ ಅವರು 1999ರಲ್ಲಿ ಐಎಎಸ್ ಅಧಿಕಾರಿಯಾಗಿ ಬಡ್ತಿ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT