ಸಂಗ್ರಹ ಚಿತ್ರ 
ದೇಶ

ಧೈರ್ಯವಿದ್ದರೆ ಚುನಾವಣೆ ಘೋಷಿಸಿ: ಪಳನಿಸ್ವಾಮಿಗೆ ದಿನಕರನ್ ಸವಾಲು!

ತಮಗೆ ಬಹುಮತವಿದೆ ಎಂದು ಬೀಗುತ್ತಿರುವ ಸಿಎಂ ಪಳನಿಸ್ವಾಮಿ ಮತ್ತು ಅವರ ತಂಡ ಧೈರ್ಯವಿದ್ದರೇ ಈಗಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಘೋಷಿಸಲಿ ಎಂದು ಎಐಎಡಿಎಂಕೆ ಪಕ್ಷದ ಉಚ್ಠಾಟಿತ ಮುಖಂಡ ಟಿಟಿವಿ ದಿನಕರನ್ ಹೇಳಿದ್ದಾರೆ.

ಚೆನ್ನೈ: ತಮಗೆ ಬಹುಮತವಿದೆ ಎಂದು ಬೀಗುತ್ತಿರುವ ಸಿಎಂ ಪಳನಿಸ್ವಾಮಿ ಮತ್ತು ಅವರ ತಂಡ ಧೈರ್ಯವಿದ್ದರೇ ಈಗಲೇ ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಘೋಷಿಸಲಿ ಎಂದು ಎಐಎಡಿಎಂಕೆ ಪಕ್ಷದ ಉಚ್ಠಾಟಿತ  ಮುಖಂಡ ಟಿಟಿವಿ ದಿನಕರನ್ ಹೇಳಿದ್ದಾರೆ.
ಚೆನ್ನೈನಲ್ಲಿ ಇಂದು ಎಐಎಡಿಎಂಕೆ ಪಕ್ಷದ ಸಾಮಾನ್ಯ ಸಭೆಯಲ್ಲಿ ಶಶಿಕಲಾ ಮತ್ತು ಟಿಟಿವಿ ದಿನಕರನ್ ಅವರನ್ನು ಪಕ್ಷದಿಂದ ಉಚ್ಛಾಟಿಸಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಟಿಟಿವಿ ದಿನಕರನ್, ಎಐಎಡಿಎಂಕೆ ಪಕ್ಷದ  ಶಾಸಕರು ಸಿಎಂ ಪಳನಿ ಸ್ವಾಮಿ ವಿರುದ್ಧ ಅವಿಶ್ವಾಸದಿಂದಿದ್ದಾರೆ. ಇದೇ ಕಾರಣಕ್ಕೆ ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಹಲವು ಸಚಿವರು ನಾವು ಡಿಎಂಕೆ ಪಕ್ಷದೊಂದಿಗೆ ಕೈ ಜೋಡಿಸಿದ್ದೇವೆ ಎಂದು ಆರೋಪಿಸುತ್ತಿದ್ದಾರೆ  ಎಂದು ಹೇಳಿದರು.

ಇದೇ ವೇಳೆ ಪ್ರಸ್ತುತ ಇರುವ ಸಿಎಂ ಪಳನಿಸ್ವಾಮಿ ಸರ್ಕಾರವನ್ನು ನಾವು ಕಿತ್ತೊಗೆದೇ ತೀರುತ್ತೇವೆ ಎಂದು ಹೇಳಿರುವ ದಿನಕರನ್, ನಿಮಗೆ ಬಹುಮತವಿದೆ ಎಂದು ಹೇಳುತ್ತಿರುವ ಪಳನಿ ಸ್ವಾಮಿ ಧೈರ್ಯವಿದ್ದರೆ ಈಗಲೇ  ವಿಧಾನಸಭೆಯನ್ನು ವಿಸರ್ಜಿಸಿ ಚುನಾವಣೆ ಘೋಷಿಸಲಿ ಎಂದು ಬಹಿರಂಗ ಸವಾಲೆಸೆದಿದ್ದಾರೆ. ಅಂತೆಯೇ ತಮಗೆ 21 ಶಾಸಕರ ಬೆಂಬಲವಿದ್ದು, ಪಳನಿಸ್ವಾಮಿ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಬಹುಮತ ಕಳೆದುಕೊಂಡಿರುವ  ಪಳನಿಸ್ವಾಮಿಗೆ ಸರ್ಕಾರ ನಡೆಸುವ ಯಾವುದೇ ನೈತಿಕತೆ ಇಲ್ಲ ಎಂದು ಕಿಡಿ ಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT