ಯೋಗ ಗುರು ಬಾಬಾ ರಾಮ್'ದೇವ್ 
ದೇಶ

ನಕಲಿ ಬಾಬಾಗಳ ಪಟ್ಟಿ: ಯಾರನ್ನು ನಂಬಬೇಕೆಂಬುದನ್ನು ಜನರೇ ನಿರ್ಧರಿಸಬೇಕು- ಬಾಬಾ ರಾಮ್'ದೇವ್

ನಡವಳಿಕೆ ಹಾಗೂ ವರ್ತನೆಗಳನ್ನು ನೋಡಿ ಯಾರನ್ನು ನಂಬಬೇಕು ಹಾಗೂ ನಂಬಬಾರದು ಎಂಬುದನ್ನು ಜನರೇ ನಿರ್ಧರಿಸಬೇಕು ಎಂದು ಯೋಗ ಗುರು ಬಾಬಾ ರಾಮ್'ದೇವ್ ಅವರು...

ನಾಗ್ಪುರ: ನಡವಳಿಕೆ ಹಾಗೂ ವರ್ತನೆಗಳನ್ನು ನೋಡಿ ಯಾರನ್ನು ನಂಬಬೇಕು ಹಾಗೂ ನಂಬಬಾರದು ಎಂಬುದನ್ನು ಜನರೇ ನಿರ್ಧರಿಸಬೇಕು ಎಂದು ಯೋಗ ಗುರು ಬಾಬಾ ರಾಮ್'ದೇವ್ ಅವರು ಮಂಗಳವಾರ ಹೇಳಿದ್ದಾರೆ. 
ಅಸಾರಾಂ ಬಾಪು, ಗುರ್ಮಿತ್ ರಾಮ್ ರಹೀಮ್ ಸಿಂಗ್, ರಾಧೇ ಮಾ, ನಿತ್ಯಾನಂದ ಪ್ರಕರಣಗಳು ದೇಶದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿರುವ ಹಿನ್ನಲೆಯಲ್ಲಿ ಸಂತರ ಉನ್ನತ ಸಂಘಟನೆಯಾಗಿರುವ ಅಖಿಲ ಭಾರತೀಯ ಅಖಾಡ ಪರಿಷತ್ (ಎಬಿಎಪಿ) ನಕಲಿ ಬಾಬಾಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಾಬಾ ರಾಮ್ ದೇವ್ ಅವರು, ಬಾಬಾಗಳ ವರ್ತನೆಗಳು ಹಾಗೂ ನಡವಳಿಕೆಗಳನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಅವರ ಉದ್ದೇಶಗಳೇನಿದೆ ಎಂಬುದನ್ನು ತಿಳಿದುಕೊಳ್ಳಬೇಕು. ಕರ್ಮಗಳನ್ನು ನಾವು ನಂಬುವುದಾದರೆ, ಯಾವುದೇ ನಕಲಿ ಬಾಬಾಗಳು ಯಾರ ಮೇಲೂ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಭಾರತದ ಸಂಸ್ಕೃತಿ ಅತ್ಯಂತ ಪುರಾತನದ್ದು. ಶುದ್ಧತೆ, ದೈವಿಕ ಜ್ಞಾನವನ್ನು ಹೊಂದಿರುವ ಸಾಕಷ್ಟು ಸಂಸತರಿದ್ದಾರೆ. ಇಡೀ ವಿಶ್ವ ಇಂತಹವರಿಂದ ಪಾಠವನ್ನು ಕಲಿತು, ಇಂತಹವರ ಮೇಲೆ ನಂಬಿಕೆಯನ್ನು ಇಡಬೇಕು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT