ಟಿಟಿವಿ ದಿನಕರನ್ 
ದೇಶ

ಪಳನಿಸ್ವಾಮಿಯನ್ನು ಹುದ್ದೆಯಿಂದ ವಜಾಗೊಳಿಸಿದ ಟಿಟಿವಿ ದಿನಕರನ್

ನಿನ್ನೆ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ.ಶಶಿಕಲಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ...

ಚೆನ್ನೈ: ನಿನ್ನೆ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ.ಶಶಿಕಲಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ ಇಂದು ಅವರ ಅಳಿಯ ಟಿಟಿವಿ ದಿನಕರನ್, ಕೇಂದ್ರ ಕಾರ್ಯದರ್ಶಿ ಹುದ್ದೆಯಿಂದ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ವಜಾಗೊಳಿಸಿ ಪಿ.ಪಳನಿಯಪ್ಪಂ ಅವರನ್ನು ನೇಮಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಮಧ್ಯಂತರ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಅವರು ನೇಮಿಸಿದ ಎಲ್ಲಾ ಹುದ್ದೆಗಳು ಅಮಾನ್ಯವಾದದ್ದು ಎಂದು ಸಂಯುಕ್ತ ಎಐಎಡಿಎಂಕೆಯ ಇತರ ನಾಯಕರು ಘೋಷಿಸಿದ್ದರು. ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಬಲ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೆಗೆದುಹಾಕುವ ಕುರಿತು ಕೂಡ ನಿರ್ಣಯ ಕೈಗೊಳ್ಳಲಾಗಿತ್ತು.
ಫೆಬ್ರವರಿ 15ರಂದು ನ್ಯಾಯಾಲಯಕ್ಕೆ ಶರಣಾಗುವವರೆಗೆ ಶಶಿಕಲಾ ಅವರು ನೇಮಿಸಿದ ಎಲ್ಲಾ ಹುದ್ದೆಗಳು ಮತ್ತು ವಜಾಗೊಳಿಸಿದ ನಿಯಮಗಳೆಲ್ಲವೂ ಅನೂರ್ಜಿತ ಎಂದು ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಸಾಮಾನ್ಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದರಿಂದ ಟಿಟಿವಿ ದಿನಕರನ್ ನೇಮಿಸಿರುವ ಹುದ್ದೆಗಳಿಗೆ ಕೂಡ ಮಾನ್ಯತೆಯಿರುವುದಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT