ಟಿಟಿವಿ ದಿನಕರನ್ 
ದೇಶ

ಪಳನಿಸ್ವಾಮಿಯನ್ನು ಹುದ್ದೆಯಿಂದ ವಜಾಗೊಳಿಸಿದ ಟಿಟಿವಿ ದಿನಕರನ್

ನಿನ್ನೆ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ.ಶಶಿಕಲಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ...

ಚೆನ್ನೈ: ನಿನ್ನೆ ಎಐಎಡಿಎಂಕೆ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ವಿ.ಕೆ.ಶಶಿಕಲಾ ಅವರನ್ನು ವಜಾಗೊಳಿಸಿದ ಬೆನ್ನಲ್ಲೆ ಇಂದು ಅವರ ಅಳಿಯ ಟಿಟಿವಿ ದಿನಕರನ್, ಕೇಂದ್ರ ಕಾರ್ಯದರ್ಶಿ ಹುದ್ದೆಯಿಂದ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ವಜಾಗೊಳಿಸಿ ಪಿ.ಪಳನಿಯಪ್ಪಂ ಅವರನ್ನು ನೇಮಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಮಧ್ಯಂತರ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಅವರನ್ನು ಹುದ್ದೆಯಿಂದ ವಜಾಗೊಳಿಸಿ ಅವರು ನೇಮಿಸಿದ ಎಲ್ಲಾ ಹುದ್ದೆಗಳು ಅಮಾನ್ಯವಾದದ್ದು ಎಂದು ಸಂಯುಕ್ತ ಎಐಎಡಿಎಂಕೆಯ ಇತರ ನಾಯಕರು ಘೋಷಿಸಿದ್ದರು. ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಬಲ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೆಗೆದುಹಾಕುವ ಕುರಿತು ಕೂಡ ನಿರ್ಣಯ ಕೈಗೊಳ್ಳಲಾಗಿತ್ತು.
ಫೆಬ್ರವರಿ 15ರಂದು ನ್ಯಾಯಾಲಯಕ್ಕೆ ಶರಣಾಗುವವರೆಗೆ ಶಶಿಕಲಾ ಅವರು ನೇಮಿಸಿದ ಎಲ್ಲಾ ಹುದ್ದೆಗಳು ಮತ್ತು ವಜಾಗೊಳಿಸಿದ ನಿಯಮಗಳೆಲ್ಲವೂ ಅನೂರ್ಜಿತ ಎಂದು ನಿರ್ಣಯ ಕೈಗೊಳ್ಳಲಾಗಿತ್ತು. ಇದೀಗ ಸಾಮಾನ್ಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದರಿಂದ ಟಿಟಿವಿ ದಿನಕರನ್ ನೇಮಿಸಿರುವ ಹುದ್ದೆಗಳಿಗೆ ಕೂಡ ಮಾನ್ಯತೆಯಿರುವುದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT