ಬಾಲಿವುಡ್ ನಟ ರಿಷಿ ಕಪೂರ್ 
ದೇಶ

ಮೊದಲು ಜನರ ಗೌರವ ಗಳಿಸಿ: ರಾಹುಲ್ ಗಾಂಧಿಗೆ ನಟ ರಿಷಿ ಕಪೂರ್ ಸಲಹೆ

ವಂಶಪಾರಂಪರ್ಯ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನೀಡಿದ್ದ ಹೇಳಿಕೆಯನ್ನು ಬಾಲಿವುಡ್ ನಟ ರಿಷಿ ಕಪೂರ್ ಅವರು ಬುಧವಾರ ತೀವ್ರವಾಗಿ ಟೀಕಿಸಿದ್ದಾರೆ...

ಮುಂಬೈ: ವಂಶಪಾರಂಪರ್ಯ ಕುರಿತಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ನೀಡಿದ್ದ ಹೇಳಿಕೆಯನ್ನು ಬಾಲಿವುಡ್ ನಟ ರಿಷಿ ಕಪೂರ್ ಅವರು ಬುಧವಾರ ತೀವ್ರವಾಗಿ ಟೀಕಿಸಿದ್ದಾರೆ. 
ರಾಹುಲ್ ಗಾಂಧಿ ಹೇಳಿಕೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ವಂಶಪಾರಂಪರ್ಯತೆ ಬಗ್ಗೆ ಸುಮ್ಮನೇ ಇಂತ ಬಾಲಿಶವಾದ ಭಾಷಣ ಮಾಡುವುದನ್ನು ಬಿಟ್ಟು, ಕಠಿಣ ಪರಿಶ್ರಮ ಪಟ್ಟು ಜನರ ಪ್ರೀತಿ ಹಾಗೂ ವಿಶ್ವಾಸವನ್ನು ರಾಹುಲ್ ಗಳಿಸಬೇಕು ಎಂದು ಸಲಹೆ ನೀಡಿದ್ದಾರೆ. 
106 ವರ್ಷಗಳ ಭಾರತೀಯ ಸಿನಿಮಾದಲ್ಲಿ ಕಪೂರ್ ವಂಶದ ಸೇವೆಯೇ ಸುಮಾರು 90 ವರ್ಷಗಳಷ್ಟಿದೆ. ದೇವರ ದಯೆದಿಂದ ಕಪೂರ್ ವಂಶ 4ನೇ ತಲೆಮಾರಿನ ಕುಡಿಯೂ ಬೆಳ್ಳಿ ತೆರೆಯಲ್ಲಿ ನಟೆಸುವುದನ್ನು ನೋಡಿದೆ. ಪ್ರತಿ ಪೀಳಿಗೆಯನ್ನೂ ಜನರೇ ಪೋಷಿಸುತ್ತಾ ಬಂದಿದ್ದಾರೆ. ಅದು ಸುಮ್ಮನೆಯ ಮಾತಲ್ಲ. ಕೇವಲ ಮೆರಿಟ್ ಆಧಾರದ ಮೇಲಷ್ಟೇ ಗೊತ್ತಾ ಎಂದು ರಾಹುಲ್ ಗೆ ಹೇಳಿದ್ದಾರೆ. 
ಪೃಥ್ವಿರಾಜ್ ಕಪೂರ್, ರಾಜ್ ಕಪೂರ್, ರಣಧೀರ್ ಕಪೂರ್ ಹಾಗೂ ರಣಬೀರ್ ಕಪೂರ್, ಕಪೂರ್ ಕುಟುಂಬದ ನಾಲ್ಕು ತಲೆಮಾರುಗಳ ನಟರಾಗಿದ್ದಾರೆ. ಕಪೂರ್ ವಂಶಸ್ಥರಂತೆಯೇ ಉಳಿದ ಕುಟುಂಬಗಳಲ್ಲೂ ಅವರವರ ಮಕ್ಕಳು, ಮೊಮ್ಮಕ್ಕಳು ಚಿತ್ರ ನಟರಾಗಿ ಬೆಳೆದಿದ್ದಾರೆ. ಗಮನಿಸಬೇಕಾದ ಅಂಶವೆಂದರೆ, 4 ತಲೆಮಾರುಗಳ ನಟರು ಜನರ ಪ್ರೀತಿ ಹಾಗೂ ಅಭಿಮಾನ, ಆಶೀರ್ವಾದಗಳಿಂದ ಮಾತ್ರವೇ ಗುರ್ತಿಸಲ್ಪಟ್ಟವರೇ ವಿನಃ ಯಾರೋ ಕಟ್ಟಿದ ಸಾಮ್ರಾಜ್ಯದಲ್ಲಿ ರಾಜರಾದವರಲ್ಲ. 
ವಂಶಪಾರಂಪರ್ಯದ ಬಗ್ಗೆ ಮಾತನಾಡುವುದಕ್ಕೆ ಅದಕ್ಕೊಂದು ಸಾಧನೆಯಿರಬೇಕು. ಸುಮ್ಮನೆ ವಂಶಪಾರಂಪರ್ಯವಿದೆ ಎಂದು ಏನೇನೊ ಹೇಳುವುದಲ್ಲ. ಹಾಗಾಗಿ ವಂಶ ಪಾರಂಪರ್ಯತೆ ಬಗ್ಗೆ ಸುಮ್ಮನೇ ಬುಲ್ ಶಿಟ್ ರೀತಿ ಜನರ ಬಗ್ಗೆ ಮಾತನಾಡಬೇಡಿ. ಮೊದಲು ಕಠಿಣ ಪರಿಶ್ರಮ ಪಟ್ಟು ಜನರ ಪ್ರೀತಿ ಹಾಗೂ ವಿಶ್ವಾಸವನ್ನು ಗಳಿಸಿ. ಬಲವಂತವಾಗಿ ಮತ್ತು ಗೂಂಡಾಗಿರಿಯಿಂದಲ್ಲ ಎಂದು ಹೇಳಿಕೊಂಡಿದ್ದಾರೆ. 
ನಿನ್ನೆಯಷ್ಟೇ ಅಮೆರಿಕಾದ ಬರ್'ಕ್ಲೆಯಲ್ಲಿನ ಪ್ರತಿಷ್ಠಿತ ಕ್ಯಾಲಿಫೋರ್ನಿಯ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಜೊತೆಗೆ ನಡೆಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿಯವರು, ಹೆಚ್ಚಿನ ದೇಶಗಳು ವಂಶಪಾರಂಪರ್ಯವಾಗಿ ನಡೆಯುತ್ತಿರುವುದು ಸಾಮಾನ್ಯವಾಗಿದೆ. ಭಾರತದಲ್ಲಿ ಕೂಡ ಅದು ಅಷ್ಟೇ ಸಾಮಾನ್ಯವಾಗಿದೆ. ಭಾರತದಲ್ಲಿನ ಬಹುತೇಕ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ವಂಶಪಾರಂಪರ್ಯ ನಡೆಯುತ್ತಿದೆ. ಅಖಿಲೇಶ್ ಯಾದವ್, ಸ್ಟಾಲಿನ್ ಮತ್ತು ನಟ ಅಭಿಷೇಕ್ ಬಚ್ಚನ್ ಕೂಡ ಸಿನಿಮಾ ರಂಗದಲ್ಲಿ ಇದಕ್ಕೆ ಉದಾಹರಣೆಯಾಗಿದ್ದಾರೆ. ಅದುದರಿಂದ ವಂಶಪಾರಂಪರ್ಯದ ಬಗ್ಗೆ ಮಾತಾಡುವಾಗ ಕೇವಲ ನನ್ನನ್ನು ಗುರಿ ಮಾಡಬೇಕೆ ಎಂದಿದ್ದರು. ರಾಹುಲ್ ಗಾಂಧಿಯವರ ಈ ಹೇಳಿಕೆಗೆ ಇದೀಗ ಸಾಕಷ್ಟು ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗತೊಡಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!

ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಿದ್ರೆ ಕೇರ್ ಮಾಡಬೇಡಿ: ಲಾಬಿಗಳಿಗೆ ಮಣಿಯಬೇಡಿ- ಡಿಕೆಶಿಗೆ ಹೈಕಮಾಂಡ್ ಖಡಕ್ ವಾರ್ನಿಂಗ್

Passport ಪೌರತ್ವದ ಪ್ರಮಾಣಪತ್ರವಲ್ಲ, Travel document ಅಷ್ಟೇ: MEA ಸ್ಪಷ್ಟನೆ, ಹೊಸ ಚರ್ಚೆಗೆ ನಾಂದಿ..!

ಭೂಕಂಪದ ರೌದ್ರನರ್ತನಕ್ಕೆ Venezuela ತತ್ತರ; Caracasನಲ್ಲಿ ಧರೆಗುರುಳಿದ ಕಟ್ಟಡಗಳು, ಸುನಾಮಿ ಎಚ್ಚರಿಕೆ..!