ರಣದೀಪ್ ಸಿಂಗ್ ಸುರ್ಜೆವಾಲಾ 
ದೇಶ

ಬೊಕ್ಕಸ ತುಂಬಿಸಿಕೊಳ್ಳುವುದನ್ನು ನಿಲ್ಲಿಸಿ, ಅಚ್ಚೇದಿನ್ ತನ್ನಿ: ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಕಿಡಿ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಿಂತ ಸಾಮಾನ್ಯ ಜನರಿಗೆ ಶೇ.50 ರಷ್ಟು ಬೆಲೆ ಕಡಿಮೆ ಮಾಡಿ ...

ನವದೆಹಲಿ: ನಿರಂತರವಾಗಿ ತೈಲ ಬೆಲೆ ಏರಿಕೆಯಾಗುತ್ತಿರುವುದಕ್ಕೆ ಆಕ್ರೋಶ ವ್ಯಕ್ತ ಪಡಿಸಿರುವ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ತೈಲ ಬೆಲೆಗಿಂತ ಸಾಮಾನ್ಯ ಜನರಿಗೆ ಶೇ.50 ರಷ್ಟು ಬೆಲೆ ಕಡಿಮೆ ಮಾಡಿ ಮಾರಾಟ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಜನರನ್ನು ಹಾಗೂ ದೇಶವನ್ನು ಲೂಟಿ ಮಾಡಿ ಬೊಕ್ಕಸ ತುಂಬಿಸಿಕೊಳ್ಳುವುದನ್ನು ನಿಲ್ಲಿಸಿ, ಚುನಾವಣೆ ವೇಳೆ ನೀಡಿದ್ದ ಭರವಸೆಯಂತೆ ದೇಶದ ಜನರಿಗೆ ಅಚ್ಛೇ ದಿನ್ ತರಬೇಕೆಂದು ಒತ್ತಾಯಿಸಿದೆ.
ಪೆಟ್ರೋಲ್, ಡಿಸೇಲ್ ಬೆಲೆ ಗಗನಮುಖಿಯಾಗುತ್ತಿದ್ದು, ಜನ ಸಾಮಾನ್ಯರಿಗೆ ಹೊರೆಯಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಣದೀಪ್ ಸಿಂಗ್ ಸುರ್ಜೆವಾಲಾ ಆರೋಪಿಸಿದ್ದಾರೆ. ಮೋದಿ ಏನು ಮಾಡುತ್ತಿದ್ದಾರೆ? ಇದೇನಾ ಅವರು ನೀಡಿದ್ದಾ ಅಚ್ಚೇ ದಿನದ ಭರವಸೆ ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT