ಸಾಂದರ್ಭಿಕ ಚಿತ್ರ 
ದೇಶ

ಎನ್ಆರ್ ಐ ಮದುವೆಗೆ ಆಧಾರ್ ಕಡ್ಡಾಯ ಮಾಡಿ: ವಿದೇಶಾಂಗ ಸಚಿವಾಲಯಕ್ಕೆ ತಜ್ಞರ ಸಮಿತಿ

ವಿಚ್ಛೇದನ ಮತ್ತು ವೈವಾಹಿಕ ವಿವಾದಗಳನ್ನು ತಡೆಯುವುದಕ್ಕಾಗಿ ಭಾರತದಲ್ಲಿ ಅನಿವಾಸಿ ಭಾರತೀಯರ(ಎನ್ಆರ್ಐ) ಮದುವೆ...

ನವದೆಹಲಿ: ವಿಚ್ಛೇದನ ಮತ್ತು ವೈವಾಹಿಕ ವಿವಾದಗಳನ್ನು ತಡೆಯುವುದಕ್ಕಾಗಿ ಭಾರತದಲ್ಲಿ ಅನಿವಾಸಿ ಭಾರತೀಯರ(ಎನ್ಆರ್ಐ) ಮದುವೆ ನೋಂದಣಿಗೆ ಆಧಾರ್ ಕಡ್ಡಾಯಗೊಳಿಸಬೇಕು ಎಂದು ಅಂತರ ಸಚಿವಾಲಯ ಸಮಿತಿ ವಿದೇಶಾಂಗ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.
ವಿದೇಶಗಳಲ್ಲಿ ಭಾರತೀಯ ಪಾಸ್ ಪೋರ್ಟ್ ಹೊಂದಿರುವ ಎನ್ಆರ್ಐ ಪತಿಗಳಿಂದ ಮಹಿಳೆಯರು ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಒಳಗಾಗುವುದು ತಡೆಯಲು ಹಾಗೂ ವಿಚ್ಚೇದನಕ್ಕೆ ಒಳಗಾಗುವ ಮಹಿಳೆಯ ಹಕ್ಕು ರಕ್ಷಿಸುವುದಕ್ಕಾಗಿ ಆಧಾರ್ ಕಡ್ಡಾಯಗೊಳಿಸಬೇಕು ಎಂದು ವಿಶೇಷ ಸಮಿತಿ ವರದಿ ನೀಡಿದೆ.
ಪತ್ನಿಗೆ ಹಿಂಸೆ ನೀಡುವ ಎನ್ಆರ್ಐ ಪತಿಯನ್ನು ವಶಕ್ಕೆ ಪಡೆಯುವುದಕ್ಕಾಗಿ ವಿವಿಧ ದೇಶಗಳೊಂದಿಗಿನ ಹಸ್ತಾಂತರ ಒಪ್ಪಂದಕ್ಕೆ ತಿದ್ದುಪಡಿ ತರಬೇಕು ಎಂದು ಸಹ ಸಮಿತಿ ಶಿಫಾರಸು ಮಾಡಿದೆ.
ಎನ್ ಆರ್ ಐಗಳು ಭಾರತದಲ್ಲಿರುವ ಯುವತಿಯರನ್ನು ಮದುವೆಯಾಗಿ ವಿದೇಶಕ್ಕೆ ಕರೆದೊಯ್ದ ಮೇಲೆ ಯುವತಿಯರ ಮೇಲೆ ದೌರ್ಜನ್ಯ, ವರದಕ್ಷಿಣೆ ಕಿರುಕುಳ ಮುಂತಾದ ಪ್ರಕರಣ ನಡೆದಿರುವ ಬಗ್ಗೆ ಅನೇಕ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಸಮಿತಿಯು ಇಲಾಖೆಗೆ ಈ ಶಿಫಾರಸು ಮಾಡಿದೆ.
ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (ಯುಐಡಿಎಐ) ಈಗಾಗಲೇ ಅನಿವಾಸಿ ಭಾರತೀಯರಿಗೆ, ಭಾರತ ಮೂಲದ ವಿದೇಶಿ ನಾಗರಿಕರಿಗೆ ಹಾಗೂ ವಿದೇಶಗಳಲ್ಲಿರುವ ಭಾರತೀಯ ಸಂಜಾತರಿಗೆ ಆಧಾರ್ ಕಾರ್ಡ್ ನೀಡುವ ಬಗ್ಗೆ ಹೊಸ ನಿಯಮಾವಳಿಗಳನ್ನು ರೂಪಿಸುತ್ತಿದೆ. ಇದರ ನಡುವೆಯೇ, ಈಗ ಅಂತರ ಸಚಿವಾಲಯದ ಸಮಿತಿಯ ಈ ಹೊಸ ಶಿಫಾರಸು ಮಾಡಿರುವುದು ಮತ್ತಷ್ಟು ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT