ರೋಡ್ ಶೋ ನಲ್ಲಿ ಪ್ರಧಾನಿ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ 
ದೇಶ

ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿದ ಜಪಾನ್ ಪ್ರಧಾನಿ ಶಿಂಜೋ ಅಬೆ

2 ದಿನಗಳ ಭಾರತ ಪ್ರವಾಸ ಆರಂಭಿಸಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಬುಧವಾರ ಸಂಜೆ ಅಹ್ಮದಾಬಾದ್ ನ ಮಹಾತ್ಮ ಗಾಂಧಿ ಅವರ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿದರು.

ಅಹ್ಮದಾಬಾದ್: 2 ದಿನಗಳ ಭಾರತ ಪ್ರವಾಸ ಆರಂಭಿಸಿರುವ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಬುಧವಾರ ಸಂಜೆ ಅಹ್ಮದಾಬಾದ್ ನ ಮಹಾತ್ಮ ಗಾಂಧಿ ಅವರ ಸಾಬರಮತಿ ಆಶ್ರಮಕ್ಕೆ ಭೇಟಿ ನೀಡಿದರು.

ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಾಥ್ ನೀಡಿದರಲ್ಲದೇ, ಆಶ್ರಮದ ಕುರಿತು ಶಿಂಜೋ ಅಬೆ ಮತ್ತು ಅವರ ಪತ್ನಿ ಅಕೀ ಅಬೆ ಅವರಿಗೆ ಮಾಹಿತಿ ನೀಡಿದರು. ಆಶ್ರಮ ಭೇಟಿ ಬಳಿಕ ಜಪಾನ್ ಪ್ರಧಾನಿ ಹಾಗೂ ಅವರ ಪತ್ನಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖ್ಯಾತ "ಸಿದಿ ಸೈಯ್ಯದ್ ನಿ ಜಾಲಿ ಮಸೀದಿ"ಗೆ ಕರೆದೊಯ್ದರು.

ದೇಶದ ಪ್ರಧಾನಿಯಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ಮಸೀದಿಗೆ ಭೇಟಿ ನೀಡಿದ್ದು, ಅದೂ ಕೂಡ ಜಪಾನ್ ಪ್ರಧಾನಿಗಳೊಂದಿಗೆ ಮಸೀದಿಗೆ ಭೇಟಿ ನೀಡಿದ್ದು, ವಿಶೇಷವಾಗಿತ್ತು. "ಸಿದಿ ಸೈಯ್ಯದ್ ನಿ ಜಾಲಿ ಮಸೀದಿ" 16ನೇ ಶತಮಾನದ ಐತಿಹಾಸಿಕ ಮಸೀದಿಯಾಗಿದ್ದು, ಪ್ರತೀ ವರ್ಷ ವಿಶ್ವಾದ್ಯಂತ ಲಕ್ಷಾಂತರ ಮುಸ್ಲಿಂ ಬಾಂಧವರು ಇಲ್ಲಿಗೆ ಭೇಟಿ ನೀಡುತ್ತಾರೆ.
------
ಗುಜರಾತ್ ನ ಅಹ್ಮದಾಬಾದ್ ವಿಮಾನ ನಿಲ್ದಾಣಕ್ಕೆ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಆಗಮಿಸಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಆತ್ಮೀಯ ಅಪ್ಪುಗೆ ಮೂಲಕ ಶಿಂಜೋ ಅಬೆ ಮತ್ತು ಅವರ  ಪತ್ನಿ ಅಕೀ ಅಬೆ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ಗುಜರಾತ್‌ನಲ್ಲಿ  ನಡೆಯಲಿರುವ ಭಾರತ-ಜಪಾನ್ ವಾರ್ಷಿಕ ಶೃಂಗಸಭೆ ಅಂಗವಾಗಿ ಇಂದು ಮತ್ತು ನಾಳೆ ಎರಡು ದಿನ ಜಪಾನ್‌ ಪ್ರಧಾನಿ ಶಿಂಜೋ ಅಬೆ ಭಾರತದಲ್ಲೇ ಉಳಿಯಲಿದ್ದಾರೆ. ಭಾರತದಲ್ಲಿ ಜಪಾನ್ ದೇಶದ  ಸಹಯೋಗದೊಂದಿಗೆ ಕೇಂದ್ರ ಸರ್ಕಾರ ಬುಲೆಟ್ ರೈಲು ಯೋಜನೆಗೆ ಕೈಹಾಕಿದ್ದು, ಇದೇ ಕಾರಣಕ್ಕೆ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಈ ಎರಡು ದಿನಗಳ ಭಾರತ ಪ್ರವಾಸ ತೀವ್ರ ಕುತೂಹಲ ಕೆರಳಿಸಿದೆ.
ಇನ್ನು ಜಪಾನ್ ಪ್ರಧಾನಿ ಶಿಂಜೋ ಅಬೆ ಅವರಿಗೆ ಅದ್ಧೂರಿ ಸ್ವಾಗತ ಕೋರುವ ನಿಟ್ಟಿನಲ್ಲಿ ಅಹ್ಮದಾಬಾದ್ ವಿಮಾನ ನಿಲ್ದಾಣದಿಂದಲೇ ಅದ್ಧೂರಿ ರೋಡ್ ಶೋ ಆಯೋಜಿಸಲಾಗಿದ್ದು, ಅಹಮದಬಾದ್ ವಿಮಾನ ನಿಲ್ದಾಣದಿಂದ  ಪ್ರಾರಂಭಗೊಳ್ಳುವ ರೋಡ್‌ ಶೋ ಸುಮಾರು 8 ಕಿಲೋಮೀಟರ್‌ ಕ್ರಮಿಸಿ ಬಳಿಕ ಐತಿಹಾಸಿಕ ಸಾಬರಮತಿ ಆಶ್ರಮದಲ್ಲಿ ಕೊನೆಗೊಳ್ಳಲಿದೆ. ರೋಡ್‌ ಶೋ ನಂತರ ಸಾಬರಮತಿ ಆಶ್ರಮದಲ್ಲೇ ಇಬ್ಬರು ನಾಯಕರು ತಂಗಲಿದ್ದು,  ಸಂಜೆ ನಗರದ ಪೂರ್ವ ಭಾಗದ ಸಿದಿ ಸೈಯ್ಯದ್ ಮಸೀದಿಗೆ ಭೇಟಿ ನೀಡಲಿದ್ದಾರೆ.
ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿ ಇನ್ನೊಂದು ದೇಶದ ಪ್ರಧಾನಿಯೊಂದಿಗೆ ರೋಡ್‌ ಶೋನಲ್ಲಿ ಭಾಗವಹಿಸುತ್ತಿದ್ದಾರೆ. ಇನ್ನು ಶಿಂಜೋ ಅಬೆ ಭಾರತ ಭೇಟಿ ಪ್ರಮುಖ ಎನಿಸಿದ್ದು, ಭಾರತ-ಜಪಾನ್ ನಡುವಿನ ವಿವಿಧ  ಕ್ಷೇತ್ರಗಳಲ್ಲಿನ ಸಹಕಾರದ ಪ್ರಗತಿಯನ್ನು ಇಬ್ಬರೂ ನಾಯಕರು ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟಂಬರ್‌ 14ರಂದು ಅಂದರೆ ನಾಳೆ ಮುಂಬೈ-ಅಹಮದಾಬಾದ್ ನಡುವಿನ ಬುಲೆಟ್‌ ರೈಲು ಯೋಜನೆಗೆ  ಉಭಯ ನಾಯಕರು ಚಾಲನೆ ನೀಡಲಿದ್ದಾರೆ. ಆನಂತರ ಗುಜರಾತ್‌ ನ ಗಾಂಧಿನರದಲ್ಲಿ ನಡೆಯಲಿರುವ 12ನೇ ಭಾರತ ಮತ್ತು ಜಪಾನ್‌ ವಾರ್ಷಿಕ ಶೃಂಗಸಭೆಯಲ್ಲಿ ಶಿಂಜೋ ಅಬೆ ಮತ್ತು ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT