ಸರ್ವೋಚ್ಚ ನ್ಯಾಯಾಲಯ 
ದೇಶ

ಹಿಂದು ವಿವಾಹ ಕಾಯ್ದೆ: 6 ತಿಂಗಳ ಕಾಯುವಿಕೆ ಕಡ್ಡಾಯವಲ್ಲ, ಸುಪ್ರೀಂ ಮಹತ್ವದ ತೀರ್ಮಾನ

ಹಿಂದೂ ವಿವಾದ ಕಾಯ್ದೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್‌, ವಿಚ್ಚೇದನ ಸಂದರ್ಭದಲ್ಲಿ "6 ತಿಂಗಳ ಕಾಯುವಿಕೆ' ಕಡ್ಡಾಯವಲ್ಲ ಎಂದು ತೀರ್ಪು ನೀಡಿದೆ.

ನವದೆಹಲಿ: ಹಿಂದೂ ವಿವಾಹ ಕಾಯ್ದೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್‌, ವಿಚ್ಚೇದನ ಸಂದರ್ಭದಲ್ಲಿ  "6 ತಿಂಗಳ ಕಾಯುವಿಕೆ' ಕಕಡ್ಡಾಯವಲ್ಲ ಎಂದು ಮಹಣ್ತೀದ ತೀರ್ಪು ನೀಡಿದೆ.
ನ್ಯಾಯಮೂರ್ತಿ ಆದರ್ಶ್‌ ಕೆ. ಗೋಯಲ್‌ ಮತ್ತು ನ್ಯಾಯಮೂರ್ತಿ ಉದಯ್‌ ಯು. ಲಲಿತ್‌  ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದ್ದು, ಪತಿ-ಪತ್ನಿ ಒಪ್ಪಿ ಸ್ವಯಂ ಪ್ರೇರಿತವಾಗಿ ವಿಚ್ಛೇದನಕ್ಕೆ ಮುಂದಾದರೆ 6 ತಿಂಗಳು ಕಾಯುವ ಆವಶ್ಯಕತೆ ಇಲ್ಲ ಎಂದು ಹೇಳಿದೆ.
ಪತಿ, ಪತ್ನಿ ಬೇರೆ ಬೇರೆಯಾಗಿ ಒಂದು ವರ್ಷವಾಯಿತು, ಹೀಗಾಗಿ ವಿಚ್ಚೇದನ ನೀಡಿ ಎಂದು ಕೇಳುವ ಅಗತ್ಯವೂ ಇಲ್ಲ ಎಂದಿದೆ. 
ಅಂದರೆ ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್‌ 13(ಬಿ) ನಲ್ಲಿ 18 ತಿಂಗಳು ಕಾಯುವಿಕೆ ಅವಧಿ ಅನಂತರ ವಿಚ್ಚೇದನ ಕೊಡಬಹುದು ಎಂದಿದೆ.
ಸೆಕ್ಷನ್‌ 13(1)ರಲ್ಲಿ ವಿಚ್ಛೇದನ ಅರ್ಜಿ ಸಲ್ಲಿಸುವ ಮುನ್ನ ಪತಿ, ಪತ್ನಿ ಒಂದು ವರ್ಷ ಬೇರೆ ಬೇರೆಯಾಗಿರಬೇಕು ಎಂದಿದೆ. ಹಾಗೆಯೇ ಸೆಕ್ಷನ್‌ 13ಬಿ(2)ನಲ್ಲಿ ವಿಚ್ಛೇದನ ಪ್ರಕ್ರಿಯೆ ಶುರುವಾದ ಮೇಲೆ ಆರು ತಿಂಗಳು ಪುನಃ ಜತೆಯಾಗಿರಬೇಕು. ಅಂದರೆ ಒಟ್ಟಾರೆ 18 ತಿಂಗಳುಗಳ ಕಾಲ ಒಟ್ಟಾಗಿರಬೇಕು ಎಂದು ಉಲ್ಲೇಖಿಸಲಾಗಿದೆ
ಪತಿ-ಪತ್ನಿ ಪರಸ್ಪರ ಒಪ್ಪಿಗೆಯಿಂದಲೇ ವಿಚ್ಚೇದನಕ್ಕೆ ಅರ್ಜಿ ಸಲ್ಲಿಸುವ ಮುನ್ನ  ಒಂದು ವರ್ಷ ಹಾಗೂ ಅನಂತರ ಆರು ತಿಂಗಳು ಜತೆಯಲ್ಲಿ ಇರಬೇಕು ಎಂಬ ನಿಯಮಗಳನ್ನೇ ಇದೀಗ ಸುಪ್ರೀಂ ಕೋರ್ಟ್‌ ತೆಗೆದು ಹಾಕಿದೆ.
ಹಿಂದೂ ವಿವಾಹ ಕಾಯ್ದೆಯ ಸೆಕ್ಷನ್‌ 13ಬಿ ಪ್ರಕಾರ ಪರಸ್ಪರ ಒಪ್ಪಿಗೆ ಇದ್ದರೆ ವಿಚ್ಚೇದನ ಕೊಡಬಹುದು ಎಂದಿದೆ. ಆದರೆ ಪತಿ-ಪತ್ನಿಗೆ ಒಟ್ಟಾಗಿ ಬದುಕುವುದೇ ಅಸಾಧ್ಯವೆಂಬ ಪರಿಸ್ಥಿತಿ ನಿರ್ಮಾಣವಾದಾಗ ವಿಚ್ಚೇದನ ನೀಡಬಹುದು ಎಂದು ಉಲ್ಲೇಖವಿದೆ..
ಕಾಯ್ದೆಯ ಪ್ರಕಾರ, ಆರು ತಿಂಗಳ ಅವಧಿ ಇರುವುದು ತೀರಾ ಅವಸರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಬಾರದು ಎನ್ನುವ ಕಾರಣಕ್ಕಾಗಿ ಇದೆ. ಈ ಅಂಶ ಚೆನ್ನಾಗಿಯೇ ಇದೆ. ಆದರೆ, ಪತಿ-ಪತ್ನಿಗೆ ಜತೆಯಲ್ಲಿ ಬಾಳಲು ಸಾಧ್ಯವೇ ಇಲ್ಲ ಎಂದು ಅರಿವಾದ ಮೇಲೆ ಜತೆಯಲ್ಲಿ ಬದುಕು ನಡೆಸಿ ಎಂದು ಹೇಳುವುದರಲ್ಲಿ ಯಾವುದೇ ಅರ್ಥವಿಲ್ಲ. ಹೀಗಾಗಿ ಈ 'ಕೂಲಿಂಗ್‌ ಆಫ್' ಅವಧಿಯನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ನ್ಯಾಯಪೀಠ ತನ್ನ ತೀರ್ಪಿನಲ್ಲಿ ಹೇಳಿದೆ.
ಹಾಗೆಂದು ಎಲ್ಲಾ ವಿಚ್ಚೇದನ ಪ್ರಕರಣ್ಗಳಲ್ಲಿ ತಕ್ಷಣ ವಿಚ್ಚೇದನ ನೀಡುವಂತಿಲ್ಲ. ಆಯಾ ಪರಿಸ್ಥಿತಿಗಳಿಗೆ ಅನುಗುಣವಾಗಿಯೇ ತೀರ್ಪು ನೀದಬೇಕೆಂದು ಸರ್ವೋಚ್ಚ ನ್ಯಾಯಾಲಯ ತನ್ನ ಕೆಳಗಿನ ನ್ಯಾಯಾಲಯಗಳಿಗೆ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT