ಕಾರ್ತಿ ಚಿದಂಬರಂ 
ದೇಶ

ನನಗೆ ಸಮನ್ಸ್ ನೀಡುವ ಅಧಿಕಾರ ಸಿಬಿಐಗೆ ಇಲ್ಲ: ತನಿಖಾ ಸಂಸ್ಥೆಗೆ ಕಾರ್ತಿ ಚಿದಂಬರಂ ಪತ್ರ

ಏರ್ ಸೆಲ್ - ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಸಮನ್ಸ್ ನೀಡುವ ಅಧಿಕಾರ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ....

ನವದೆಹಲಿ: ಏರ್ ಸೆಲ್ - ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ಸಮನ್ಸ್ ನೀಡುವ ಅಧಿಕಾರ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ)ಗೆ ಇಲ್ಲ ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಗುರುವಾರ ಸಿಬಿಐಗೆ ಪತ್ರ ಬರೆದು ತಿಳಿಸಿದ್ದಾರೆ. 
ಏರ್ ಸೆಲ್ - ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯಷ್ಟೆ ಸಿಬಿಐ ಕಾರ್ತಿಗೆ ಸಮನ್ಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐಗೆ ಪತ್ರ ಬರೆದಿರುವ ಕಾರ್ತಿ ಚಿದಂಬರಂ ಅವರು, ಫೆಬ್ರವರಿ 2, 2017ರಂದು ನೀಡಿದ ನೋಟಿಸ್ ಪ್ರಕಾರ, ಈ ಪ್ರಕರಣದಲ್ಲಿ ತಮಗೆ ಸಮನ್ಸ್ ಜಾರಿ ಮಾಡುವ ಅಧಿಕಾರಿ ತನಿಖಾ ಸಂಸ್ಥೆಗೆ ಇಲ್ಲ ಎಂದಿದ್ದಾರೆ.
ಏರ್ ಸೆಲ್ - ಮ್ಯಾಕ್ಸಿಸ್ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧ ಇಲ್ಲ ಮತ್ತು ಅದರ ಬಗ್ಗೆ ನನ್ನ ಬಳಿ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಆ ಕುರಿತು ನಾನು ಯಾವುದೇ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದು ಕಾರ್ತಿ ಚಿದಂಬರಂ ಅವರು ಪತ್ರದ ಮೂಲಕ ಸ್ಪಷ್ಟಪಡಿಸಿದ್ದಾರೆ.
ಏರ್ ಸೆಲ್ - ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಯಾವುದೇ ಮಹಿತಿ ಅಥವಾ ಸಂಪರ್ಕವನ್ನು ನಾನು ನಿರಾಕರಿಸುತ್ತೇನೆ ಎಂದು ಕಾರ್ತಿ ಹೇಳಿದ್ದಾರೆ. ಕಾರ್ತಿ ಚಿದಂಬರಂ ಪತ್ರವನ್ನು ಓದಿ ಮಾಧ್ಯಮಕ್ಕೆ ತಿಳಿಸಿದ ಅವರ ವಕೀಲರು, ಈ ಕುರಿತು ನನ್ನ ಕಕ್ಷಿದಾರರು ಯಾವುದೇ ಹೇಳಿಕೆ ನೀಡುವ ಅಗತ್ಯವಿಲ್ಲ ಎಂದಿದ್ದಾರೆ.
ಏರ್ ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ನಿಮ್ಮ ಹಣಕಾಸು ದಾಖಲೆಗಳೊಂದಿಗೆ ಒಂದು ವಾರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐಗೆ ಕಾರ್ತಿ ಚಿದಂಬರಂಗೆ ಸಮನ್ಸ್ ನೀಡಿತ್ತು.
2015ರಿಂದಲೇ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಕಾರ್ತಿ ಚಿದಂಬರಂ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.
ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಏರ್ ಸೆಲ್ -ಮ್ಯಾಕ್ಸಿಸ್ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್‌ ಅವರನ್ನು ವಿಚಾರಣೆ ನಡೆಸಲು ಸಿಬಿಐ ಉದ್ದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT