ರೋಹಿಂಗ್ಯ ನಿರಾಶ್ರಿತರು 
ದೇಶ

ಬಾಂಗ್ಲಾದಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ಪರಿಹಾರ ಸಾಮಗ್ರಿ ಕಳಿಸಿದ ಭಾರತ!

ಮಯನ್ಮಾರ್ ನಿಂದ ಹೊರನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾಗೆ ಪ್ರವೇಶಿಸಿದ್ದು, ನಿರಾಶ್ರಿತರನ್ನು ನಿರ್ವಹಿಸುತ್ತಿರುವ ಬಾಂಗ್ಲಾದೇಶಕ್ಕೆ ಭಾರತ ನೆರವಿನ ಹಸ್ತ ನೀಡಿದೆ.

ನವದೆಹಲಿ: ಮಯನ್ಮಾರ್ ನಿಂದ ಹೊರನಡೆಯುತ್ತಿರುವ ರೋಹಿಂಗ್ಯಾ ಮುಸ್ಲಿಮರು ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾಗೆ ಪ್ರವೇಶಿಸಿದ್ದು, ನಿರಾಶ್ರಿತರನ್ನು ನಿರ್ವಹಿಸುತ್ತಿರುವ ಬಾಂಗ್ಲಾದೇಶಕ್ಕೆ ಭಾರತ ನೆರವಿನ ಹಸ್ತ ನೀಡಿದೆ. 
ಬಾಂಗ್ಲಾದಲ್ಲಿರುವ ರೋಹಿಂಗ್ಯಾ ನಿರಾಶ್ರಿತರಿಗೆ ಭಾರತ ಪರಿಹಾರ ಸಾಮಗ್ರಿಗಳನ್ನು ಕಳಿಸುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಪರಿಹಾರ ಸಾಮಗ್ರಿಗಳ ಮೊದಲ ಟ್ರಕ್ ಸೆ.14 ರಂದು ಚಿತ್ತಗಾಂಗ್ ನ್ನು ತಲುಪಲಿದೆ. 
ಅಕ್ಕಿ, ಬೇಳೆ ಕಾಳುಗಳು, ಸಕ್ಕರೆ, ಉಪ್ಪು, ಅಡುಗೆ ಎಣ್ಣೆ, ಚಹಾ, ನೂಡಲ್ಸ್, ಬಿಸ್ಕೇಟ್, ಸೊಳ್ಳೆ ಪರದೆಗಳು ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಭಾರತ ಬಾಂಗ್ಲಾದೇಶಕ್ಕೆ ಕಳಿಸಿಕೊಡುತ್ತಿದೆ. ಭಾರತ-ಬಾಂಗ್ಲಾ ನಡುವಿನ ಸ್ನೇಹವನ್ನು ಗಮನದಲ್ಲಿಟ್ಟುಕೊಂಡು ಬಾಂಗ್ಲಾದೇಶಕ್ಕೆ ನೆರವು ನೀಡುವ ವಿಚಾರದಲ್ಲಿ ಭಾರತ ಎಂದಿಗೂ ತಕ್ಷಣವೇ ಕ್ರಮಗಳನ್ನು ಕೈಗೊಂಡಿದೆ ಎಂದು ವಿದೇಶಾಂಗ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ವಿಶ್ವಸಂಸ್ಥೆಯ ವರದಿಯ ಪ್ರಕಾರ ಆ.25 ರಿಂದ ಈ ವರೆಗೆ  379,000 ರೋಹಿಂಗ್ಯ ಮುಸ್ಲಿಮರು ಮಯನ್ಮಾರ್ ನಿಂದ ಬಾಂಗ್ಲಾಗೆ ವಲಸೆ ಹೋಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT