ಜಪಾನ್ ಪ್ರಧಾನಿ ಶಿಂಜೋ ಅಬೆ ಹಾಗೂ ಬುಲೆಟ್ ರೈಲು 
ದೇಶ

ಭಾರತದ ಮೊಟ್ಟಮೊದಲ ಬುಲೆಟ್ ರೈಲು ಯೋಜನೆಗೆ ಇಂದು ನರೇಂದ್ರ ಮೋದಿ, ಶಿಂಜೋ ಅಬೆ ಚಾಲನೆ!

ಭಾರತದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಗುರುವಾರ ಅಹ್ಮದಾಬಾದ್ ನಲ್ಲಿ ಚಾಲನೆ ನೀಡಲಿದ್ದಾರೆ.

ಅಹ್ಮದಾಬಾದ್: ಭಾರತದ ಮೊಟ್ಟ ಮೊದಲ ಬುಲೆಟ್ ರೈಲು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಜಪಾನ್ ಪ್ರಧಾನಿ ಶಿಂಜೋ ಅಬೆ ಗುರುವಾರ ಅಹ್ಮದಾಬಾದ್ ನಲ್ಲಿ ಚಾಲನೆ ನೀಡಲಿದ್ದಾರೆ.
ಗುಜರಾತ್ ನ ಅಹ್ಮದಾಬಾದ್ ನಿಂದ ಮುಂಬೈಗೆ ಪ್ರಪ್ರಥಮ ಬುಲೆಟ್ ರೈಲು ಸಂಚಾರ ಮಾಡಲಿದ್ದು, ಈ ಯೋಜನೆ ಪೂರ್ಣಗೊಳ್ಳಲು 2022ರವರೆಗೂ ಕಾಲಮಿತಿ ವಿಧಿಸಲಾಗಿದೆ. ಎರಡು ಪ್ರಮುಖ ನಗರಗಳ ನಡುವಿನ ಸುಮಾರು  500 ಕಿ.ಮೀ ದೂರದ ಬುಲೆಟ್ ರೈಲು ಯೋಜನೆಗೆ ಇಂದು ಉಭಯ ನಾಯಕರು ಅಡಿಗಲ್ಲು ಹಾಕುವ ಮೂಲಕ ಚಾಲನೆ ನೀಡಲಿದ್ದಾರೆ. ತಜ್ಞರು ಅಭಿಪ್ರಾಯಪಟ್ಟಿರುವಂತೆ ಈ ಯೋಜನೆ ಪೂರ್ಣಗೊಂಡ ಬಳಿಕ ಕೇವಲ 2 ಗಂಟೆಗಳಲ್ಲಿ  ಅಹ್ಮದಾಬಾದ್ ನಿಂದ ಮುಂಬೈ ಸಂಚರಿಸಬಹುದಾಗಿದೆ.

ಈ ಬೃಹತ್ ಯೋಜನೆ ಒಟ್ಟು 108 ಲಕ್ಷ ಕೋಟಿ ಹಣ ಖರ್ಚಾಗಲಿದ್ದು, ಜಪಾನ್ ಸರ್ಕಾರ ಈ ಯೋಜನೆಗಾಗಿ ಶೇ.81 ರಷ್ಟು ಅಂದರೆ ಸುಮಾರು 88 ಸಾವಿರ ಕೋಟಿ ಹಣ ಸಾಲ ನೀಡಲು ಸಿದ್ಧವಾಗಿದೆ. ಇಂತಹ ಸಾಲಗಳಿಗೆ  ವಿಶ್ವಬ್ಯಾಂಕ್ ವಾರ್ಷಿಕ ಶೇ.5 ರಿಂದ 7ರವರೆಗೂ  ಬಡ್ಡಿ ವಿಧಿಸುತ್ತದೆ. ಆದರೆ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ಹಾಲಿ ಬುಲೆಟ್ ರೈಲು ಯೋಜನೆ ಭಾರತ-ಜಪಾನ್ ಸ್ನೇಹದ ದ್ಯೋತಕವಾಗಿರುವುದರಿಂದ ಶೇ.0.1ರಷ್ಟು  ಬಡ್ಡಿದರಕ್ಕೆ ಸಾಲ ನೀಡಿದ್ದಾರೆ.

ವಿಶ್ವ ಬ್ಯಾಂಕ್ ಸಾಲದ ಗಡುವು 25-35 ವರ್ಷಗಳಾಗಿದೆ, ಜಪಾನ್ ಸರ್ಕಾರ ಭಾರತಕ್ಕೆ 15 ವರ್ಷಗಳ ಹೆಚ್ಚುವರಿ ಕಾಲ ಮಿತಿಯನ್ನೂ ನೀಡಿದೆ. ಅದರಂತೆ ಭಾರತ ಸರ್ಕಾರ 50 ವರ್ಷಗಳಲ್ಲಿ ಈ ಸಾಲವನ್ನು ಜಪಾನ್ ಸರ್ಕಾರಕ್ಕೆ  ವಾಪಸ್ ಮಾಡಬೇಕಿದೆ.  ಇನ್ನು ಉಭಯ ನಾಯಕರು ಈ ಬುಲೆಟ್ ರೈಲು ಯೋಜನೆಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಗಾಂಧಿ ನಗರದಲ್ಲಿ ನಡೆಯುವ 12ನೇ ಇಂಡೋ-ಜಪಾನ್ ವಾರ್ಷಿಕ ಸಮಿತ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT