ಗುರ್ಮೀತ್ ರಾಮ್ ರಹೀಮ್ ಸಿಂಗ್ 
ದೇಶ

ಡೇರಾ ಸಚ್ಚಾ ಸೌದಾಗೆ ಘೋಷಿಸಿದ್ದ 51 ಲಕ್ಷ ರು.ಅನುದಾನ ಹಿಂಪಡೆದ ಹರಿಯಾಣ ಸಚಿವ

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾದ ನಂತರ ಅತ್ಯಾಚಾರಿ....

ಚಂಡೀಗಢ: ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾದ ನಂತರ ಅತ್ಯಾಚಾರಿ ಬಾಬಾನ ಆಶ್ರಮಕ್ಕೆ ಘೋಷಿಸಲಾಗಿದ್ದ 51 ಲಕ್ಷ ರುಪಾಯಿ ಅನುದಾನವನ್ನು ಹರಿಯಾಣ ಸರ್ಕಾರ ಶುಕ್ರವಾರ ಹಿಂಪಡೆದಿದೆ.
ಆಗಸ್ಟ್ 15ರಂದು ಡೇರಾ ಸಚ್ಚಾ ಸೌದಾದ ಸಿರ್ಸಾ ಆಶ್ರಮಕ್ಕೆ ಘೋಷಿಸಲಾಗಿದ್ದ 51 ಲಕ್ಷ ರುಪಾಯಿ ಅನುದಾನವನ್ನು ವಾಪಸ್ ಪಡೆದಿರುವುದಾಗಿ ಹರಿಯಾಣ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ಅವರು ಇಂದು ವರದಿಗಾರರಿಗೆ ತಿಳಿಸಿದ್ದಾರೆ.
ಆಗಸ್ಟ್ 15ರಂದು ಸಿರ್ಸಾ ಆಶ್ರಮಕ್ಕೆ ಭೇಟಿ ನೀಡಿದ್ದ ಸಚಿವ ಶರ್ಮಾ ಅವರು, ಅಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡೇರಾ ಸಚ್ಚಾ ಸೌದಾಗೆ 51 ಲಕ್ಷ ರುಪಾಯಿ ಅನುದಾನ ಘೋಷಿಸಿದ್ದರು. ಅಲ್ಲದೆ 60 ವರ್ಷದ ಸಚಿವರು 50 ವರ್ಷದ ಸ್ವಯಂ ಘೋಷಿತ ದೇವಮಾನವನ ಕಾಲಿಗೆ ಬಿದ್ದು ನಮಸ್ಕರಿಸಿದ್ದರು.
ಆಶ್ರಮದಲ್ಲಿ ಇಬ್ಬರು ಸಾದ್ವಿಯರ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಬಾಬಾನಿಗೆ ಪಂಚಕುಲ ಸಿಬಿಐ ವಿಶೇಷ ಕೋರ್ಟ್ ಆಗಸ್ಟ್ 25ರಂದು 20 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT