ಕಮಲ್ ಹಾಸನ್ 
ದೇಶ

ಎಐಎಡಿಎಂಕೆ ಬಂಡಾಯ ಶಾಸಕರ ವಿರುದ್ಧ ಕಮಲ್ ಹಾಸನ್ ವಾಗ್ದಾಳಿ

ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಕರ್ನಾಟಕದ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ....

ಚೆನ್ನೈ: ತಮಿಳುನಾಡು ರಾಜಕೀಯ ಬಿಕ್ಕಟ್ಟು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಕರ್ನಾಟಕದ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಎಐಎಡಿಎಂಕೆ ಬಂಡಾಯ ಶಾಸಕರ ವಿರುದ್ಧ ತಮಿಳು ಮೆಗಾ ಸ್ಟಾರ್ ಕಮಲ್ ಹಾಸನ್ ಅವರು ಶುಕ್ರವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆಯಷ್ಟೇ ತಮಿಳುನಾಡು ಸರ್ಕಾರ ಪ್ರತಿಭಟನಾ ನಿರತ ಸರ್ಕಾರಿ ನೌಕರರಿಗೆ, ಕೆಲಸ ಮಾಡಿದ್ರೆ ಸಂಬಳ ಇಲ್ಲದಿದ್ದರೆ ಇಲ್ಲ ಎಂಬ ಆದೇಶ ನೀಡಿತ್ತು. ಇದೇ ಮಾನದಂಡ ಬಂಡಾಯ ಶಾಸಕರಿಗೂ ಅನ್ವಯವಾಗಬೇಕು ಎಂದು ಕಮಲ್ ಹಾಸನ್ ಅವರು ಟ್ವೀಟ್ ಮಾಡಿದ್ದಾರೆ.
ಕೆಲಸ ಮಾಡಿದ್ರೆ ಸಂಬಳ ಇಲ್ಲದಿದ್ದರೆ ಇಲ್ಲ ಎಂಬ ನಿಯಮ ಕೇವಲ ಸರ್ಕಾರಿ ನೌಕರರಿಗೆ ಏಕೆ? ಕುದುರೆ ವ್ಯಾಪಾರ ನಡೆಸುವ, ಐಶಾರಾಮಿ ರೆಸಾರ್ಟ್ ಗಳಲ್ಲಿ ತಂಗಿರುವ ಶಾಸಕರಿಗೆ ಏಕಿಲ್ಲ? ಎಂದು ಕಮಲ್ ಪ್ರಶ್ನಿಸಿದ್ದಾರೆ.
ಎಐಎಡಿಎಂಕೆಯ ಉಚ್ಚಾಟಿತ ನಾಯಕ ಟಿಟಿವಿ ದಿನಕರನ್ ಬೆಂಬಲಿತ 19 ಶಾಸಕರು ಕಳೆದ ಒಂದು ವಾರದಿಂದ ಕೊಡಗಿನ ರೆಸಾರ್ಟ್ ನಲ್ಲಿ ತಂಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT