ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಜತೆ ಜಿ ಮಾಧವನ್ ನಾಯರ್ 
ದೇಶ

ಅಂತರಿಕ್ಷ್-ದೇವಾಸ್ ಒಪ್ಪಂದ: ಮಾಜಿ ಇಸ್ರೋ ಅಧ್ಯಕ್ಷ ಮಾಧವನ್ ನಾಯರ್ ಗೆ ಸಮನ್ಸ್

ಅಂತರಿಕ್ಷ್-ದೇವಾಸ್ ಒಪ್ಪಂದ ಹಗರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ಮಾಜಿ ಇಸ್ರೋ ಅಧ್ಯಕ್ಷ ಮಾಧವನ್ ನಾಯರ್ ಗೆ ಸಮನ್ಸ್ ನೀಡಿದೆ...

ನವದೆಹಲಿ: ಅಂತರಿಕ್ಷ್-ದೇವಾಸ್ ಒಪ್ಪಂದ ಹಗರಣ ಸಂಬಂಧ ಸಿಬಿಐ ವಿಶೇಷ ನ್ಯಾಯಾಲಯ ಮಾಜಿ ಇಸ್ರೋ ಅಧ್ಯಕ್ಷ ಮಾಧವನ್ ನಾಯರ್ ಗೆ ಸಮನ್ಸ್ ನೀಡಿದೆ. 
ಸಿಬಿಐ ಕೋರ್ಟ್ ನ ವಿಶೇಷ ನ್ಯಾಯಾಧೀಶರಾದ ವೀರೇಂದ್ರ ಕುಮಾರ್ ಗೋಯಲ್ ಅವರು ಮಾಧವನ್ ನಾಯರ್, ಎ ಭಾಸ್ಕರ್ ನಾರಾಯಣ್ ರಾವ್ ಮತ್ತು ಆಂಟ್ರಿಕ್ಸ್ ನ ಕಾರ್ಯನಿರ್ವಾಹಕ ನಿರ್ದೇಶಕ ಕೆಆರ್ ಶ್ರೀಧರ್ ಮೂರ್ತಿ, ಬಾಹ್ಯಾಕಾಶ ಇಲಾಖೆಯ ಮಾಜಿ ಹೆಚ್ಚುವರಿ ಕಾರ್ಯದರ್ಶಿ ವೀಣಾ ಎಸ್ ರಾವ್ ಮತ್ತು ಇತರರಿಗೆ ಡಿಸೆಂಬರ್ 23ರೊಳಗಾಗಿ ಕೋರ್ಟ್ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಿದೆ. 
ಈ ಪ್ರಕರಣ ಸಂಬಂಧ ಸಿಬಿಐ ಚಾರ್ಚ್ ಶೀಟ್ ದಾಖಲಿಸಿದ ನಂತರ ವಿಶೇಷ ನ್ಯಾಯಾಲಯ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿದೆ. 
2015ರ ಮಾರ್ಚ್ 16ರಲ್ಲಿ ಜಿ ಮಾಧವನ್ ನಾಯರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದ ಸಿಬಿಐ ಅಂತರಿಕ್ಷ್ ಹಾಗೂ ಮಲ್ಟಿ ಮೀಡಿಯಾ ಕಂಪನಿ ದೇವಾಸ್ ನಡುವಿನ ವ್ಯವಹಾರದಲ್ಲಿ 578 ಕೋಟಿ ರುಪಾಯಿ ವಂಚನೆ ಆರೋಪ ಮಾಡಿತ್ತು. 
ಇಸ್ರೋದ ಅಂಗಸಂಸ್ಥೆಯಾದ ಅಂತರಿಕ್ಷ್ ಮತ್ತು ದೇವಾಸ್ ಮಲ್ಟಿ ಮೀಡಿಯಾ ಎಂಬ ಖಾಸಗಿ ಸಂಸ್ಥೆ ನಡುವೆ ನಡೆದಿರುವ ಸ್ಪೆಕ್ಟ್ರಂ ಒಪ್ಪಂದದಿಂದ ಸರ್ಕಾರದ ಬೊಕ್ಕಸಕ್ಕೆ 2,00,000 ಕೋಟಿ ರುಪಾಯಿ ನಷ್ಟ ಸಂಭವಿಸಿದೆ ಎಂದು ಮಹಾಲೆಕ್ಕ ಪರಿಶೋಧಕ ಸಂಸ್ಥೆ(ಸಿಎಜಿ) ತಿಳಿಸಿತ್ತು. ಈ ಹಗರಣ ನಡೆದ ಸಂದರ್ಭದಲ್ಲಿ ಮಾಧವನ್ ಇಸ್ರೋದ ಅಧ್ಯಕ್ಷರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT